Categories: ಟೆನಿಸ್

ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ ಕ್ಯಾಸ್ಪರ್ ರೂಡ್ ಅವರನ್ನು ಸೋಲಿಸಿದ ನಂತರ ಅವರು 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕಿದ್ದಾರೆ.

ಮೂರು ಗಂಟೆ 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸರ್ಬಿಯಾದ 36ರ ಹರೆಯದ ಜೊಕೊವಿಕ್ 7-6, 6-3, 7-5 ಸೆಟ್‌ಗಳಿಂದ ಗೆದ್ದರು. ಅವರು ನಡಾಲ್‌ಗಿಂತ ಒಂದು ಪ್ರಶಸ್ತಿಯಿಂದ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಟೆನಿಸ್‌ನಿಂದ ನಿವೃತ್ತರಾಗಿರುವ ರೋಜರ್ ಫೆಡರರ್ ಅವರಿಗಿಂತ ಮೂರು ಪ್ರಶಸ್ತಿಗಳ ಮುಂದಿದ್ದಾರೆ.

ರೊಲ್ಯಾಂಡ್ ಗ್ಯಾರೋಸ್‌ನಲ್ಲಿ 14 ಬಾರಿ ಚಾಂಪಿಯನ್ ಆಗಿರುವ ನಡಾಲ್ ಗಾಯದ ಕಾರಣ ಈ ಬಾರಿ ಆಡುತ್ತಿಲ್ಲ. ಜೊಕೊವಿಕ್ 2016 ಮತ್ತು 2021ರಲ್ಲಿಯೂ ಪ್ರಶಸ್ತಿ ಗೆದ್ದಿದ್ದರು. ಹತ್ತು ಆಸ್ಟ್ರೇಲಿಯನ್ ಓಪನ್‌ಗಳು, ಏಳು ವಿಂಬಲ್ಡನ್ ಮತ್ತು ಮೂರು ಯುಎಸ್ ಓಪನ್‌ಗಳನ್ನು ಗೆದ್ದಿದ್ದಾರೆ.

ನೊವಾಕ್ ಜೊಕೊವಿಕ್ ಮತ್ತೊಮ್ಮೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಗ್ರ್ಯಾಂಡ್ ಸ್ಲಾಮ್‌ಗಳನ್ನು ಗೆಲ್ಲುವ ಹಾದಿಯಲ್ಲಿದ್ದಾರೆ. ರಾಡ್ ಲೇವರ್ ಈ ಸಾಧನೆಯನ್ನು 1969ರಲ್ಲಿ ಮಾಡಿದ್ದರು. ಅದನ್ನು ಯಾರೂ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಜೊಕೊವಿಕ್ 2021ರಲ್ಲಿ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವ ಮೂಲಕ ಹತ್ತಿರ ಬಂದರು. ಆದರೆ ಯುಎಸ್ ಓಪನ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.

ವಿಂಬಲ್ಡನ್ ಜುಲೈ 3 ರಿಂದ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ನಡೆಯಲಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಪಡೆಯದ ಕಾರಣ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಮತ್ತು ಯುಎಸ್ ಓಪನ್ ಆಡಲು ಸಾಧ್ಯವಾಗಲಿಲ್ಲ.

ಏನೇ ಆದರೂ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಣ್ಯರು ಅಭಿನಂದನೆಗಳ ಹೊಳೆ ಹರಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನೊವಾಕ್ ಜೊಕೊವಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನೊವಾಕ್ ಜೊಕೊವಿಕ್ ಸೆರ್ಬಿಯಾ, ಭಾರತ ಮತ್ತು ಪ್ರಪಂಚದಾದ್ಯಂತ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಆಗಿದ್ದಾರೆ. ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಪ್ರಶಂಸೆ ಮಾಡಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

6 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

7 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

11 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

13 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

16 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

17 hours ago