Categories: ಟೆನಿಸ್

ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ ಕ್ಯಾಸ್ಪರ್ ರೂಡ್ ಅವರನ್ನು ಸೋಲಿಸಿದ ನಂತರ ಅವರು 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕಿದ್ದಾರೆ.

ಮೂರು ಗಂಟೆ 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸರ್ಬಿಯಾದ 36ರ ಹರೆಯದ ಜೊಕೊವಿಕ್ 7-6, 6-3, 7-5 ಸೆಟ್‌ಗಳಿಂದ ಗೆದ್ದರು. ಅವರು ನಡಾಲ್‌ಗಿಂತ ಒಂದು ಪ್ರಶಸ್ತಿಯಿಂದ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಟೆನಿಸ್‌ನಿಂದ ನಿವೃತ್ತರಾಗಿರುವ ರೋಜರ್ ಫೆಡರರ್ ಅವರಿಗಿಂತ ಮೂರು ಪ್ರಶಸ್ತಿಗಳ ಮುಂದಿದ್ದಾರೆ.

ರೊಲ್ಯಾಂಡ್ ಗ್ಯಾರೋಸ್‌ನಲ್ಲಿ 14 ಬಾರಿ ಚಾಂಪಿಯನ್ ಆಗಿರುವ ನಡಾಲ್ ಗಾಯದ ಕಾರಣ ಈ ಬಾರಿ ಆಡುತ್ತಿಲ್ಲ. ಜೊಕೊವಿಕ್ 2016 ಮತ್ತು 2021ರಲ್ಲಿಯೂ ಪ್ರಶಸ್ತಿ ಗೆದ್ದಿದ್ದರು. ಹತ್ತು ಆಸ್ಟ್ರೇಲಿಯನ್ ಓಪನ್‌ಗಳು, ಏಳು ವಿಂಬಲ್ಡನ್ ಮತ್ತು ಮೂರು ಯುಎಸ್ ಓಪನ್‌ಗಳನ್ನು ಗೆದ್ದಿದ್ದಾರೆ.

ನೊವಾಕ್ ಜೊಕೊವಿಕ್ ಮತ್ತೊಮ್ಮೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಗ್ರ್ಯಾಂಡ್ ಸ್ಲಾಮ್‌ಗಳನ್ನು ಗೆಲ್ಲುವ ಹಾದಿಯಲ್ಲಿದ್ದಾರೆ. ರಾಡ್ ಲೇವರ್ ಈ ಸಾಧನೆಯನ್ನು 1969ರಲ್ಲಿ ಮಾಡಿದ್ದರು. ಅದನ್ನು ಯಾರೂ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಜೊಕೊವಿಕ್ 2021ರಲ್ಲಿ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವ ಮೂಲಕ ಹತ್ತಿರ ಬಂದರು. ಆದರೆ ಯುಎಸ್ ಓಪನ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.

ವಿಂಬಲ್ಡನ್ ಜುಲೈ 3 ರಿಂದ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ನಡೆಯಲಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಪಡೆಯದ ಕಾರಣ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಮತ್ತು ಯುಎಸ್ ಓಪನ್ ಆಡಲು ಸಾಧ್ಯವಾಗಲಿಲ್ಲ.

ಏನೇ ಆದರೂ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಣ್ಯರು ಅಭಿನಂದನೆಗಳ ಹೊಳೆ ಹರಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನೊವಾಕ್ ಜೊಕೊವಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನೊವಾಕ್ ಜೊಕೊವಿಕ್ ಸೆರ್ಬಿಯಾ, ಭಾರತ ಮತ್ತು ಪ್ರಪಂಚದಾದ್ಯಂತ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಆಗಿದ್ದಾರೆ. ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಪ್ರಶಂಸೆ ಮಾಡಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

15 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

21 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago