Categories: ಟೆನಿಸ್

ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ ಕ್ಯಾಸ್ಪರ್ ರೂಡ್ ಅವರನ್ನು ಸೋಲಿಸಿದ ನಂತರ ಅವರು 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕಿದ್ದಾರೆ.

ಮೂರು ಗಂಟೆ 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸರ್ಬಿಯಾದ 36ರ ಹರೆಯದ ಜೊಕೊವಿಕ್ 7-6, 6-3, 7-5 ಸೆಟ್‌ಗಳಿಂದ ಗೆದ್ದರು. ಅವರು ನಡಾಲ್‌ಗಿಂತ ಒಂದು ಪ್ರಶಸ್ತಿಯಿಂದ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಟೆನಿಸ್‌ನಿಂದ ನಿವೃತ್ತರಾಗಿರುವ ರೋಜರ್ ಫೆಡರರ್ ಅವರಿಗಿಂತ ಮೂರು ಪ್ರಶಸ್ತಿಗಳ ಮುಂದಿದ್ದಾರೆ.

ರೊಲ್ಯಾಂಡ್ ಗ್ಯಾರೋಸ್‌ನಲ್ಲಿ 14 ಬಾರಿ ಚಾಂಪಿಯನ್ ಆಗಿರುವ ನಡಾಲ್ ಗಾಯದ ಕಾರಣ ಈ ಬಾರಿ ಆಡುತ್ತಿಲ್ಲ. ಜೊಕೊವಿಕ್ 2016 ಮತ್ತು 2021ರಲ್ಲಿಯೂ ಪ್ರಶಸ್ತಿ ಗೆದ್ದಿದ್ದರು. ಹತ್ತು ಆಸ್ಟ್ರೇಲಿಯನ್ ಓಪನ್‌ಗಳು, ಏಳು ವಿಂಬಲ್ಡನ್ ಮತ್ತು ಮೂರು ಯುಎಸ್ ಓಪನ್‌ಗಳನ್ನು ಗೆದ್ದಿದ್ದಾರೆ.

ನೊವಾಕ್ ಜೊಕೊವಿಕ್ ಮತ್ತೊಮ್ಮೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಗ್ರ್ಯಾಂಡ್ ಸ್ಲಾಮ್‌ಗಳನ್ನು ಗೆಲ್ಲುವ ಹಾದಿಯಲ್ಲಿದ್ದಾರೆ. ರಾಡ್ ಲೇವರ್ ಈ ಸಾಧನೆಯನ್ನು 1969ರಲ್ಲಿ ಮಾಡಿದ್ದರು. ಅದನ್ನು ಯಾರೂ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಜೊಕೊವಿಕ್ 2021ರಲ್ಲಿ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವ ಮೂಲಕ ಹತ್ತಿರ ಬಂದರು. ಆದರೆ ಯುಎಸ್ ಓಪನ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.

ವಿಂಬಲ್ಡನ್ ಜುಲೈ 3 ರಿಂದ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ನಡೆಯಲಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಪಡೆಯದ ಕಾರಣ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಮತ್ತು ಯುಎಸ್ ಓಪನ್ ಆಡಲು ಸಾಧ್ಯವಾಗಲಿಲ್ಲ.

ಏನೇ ಆದರೂ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಣ್ಯರು ಅಭಿನಂದನೆಗಳ ಹೊಳೆ ಹರಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನೊವಾಕ್ ಜೊಕೊವಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನೊವಾಕ್ ಜೊಕೊವಿಕ್ ಸೆರ್ಬಿಯಾ, ಭಾರತ ಮತ್ತು ಪ್ರಪಂಚದಾದ್ಯಂತ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಆಗಿದ್ದಾರೆ. ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಪ್ರಶಂಸೆ ಮಾಡಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

22 hours ago