Categories: ಟೆನಿಸ್

ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ ಕ್ಯಾಸ್ಪರ್ ರೂಡ್ ಅವರನ್ನು ಸೋಲಿಸಿದ ನಂತರ ಅವರು 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕಿದ್ದಾರೆ.

ಮೂರು ಗಂಟೆ 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸರ್ಬಿಯಾದ 36ರ ಹರೆಯದ ಜೊಕೊವಿಕ್ 7-6, 6-3, 7-5 ಸೆಟ್‌ಗಳಿಂದ ಗೆದ್ದರು. ಅವರು ನಡಾಲ್‌ಗಿಂತ ಒಂದು ಪ್ರಶಸ್ತಿಯಿಂದ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಟೆನಿಸ್‌ನಿಂದ ನಿವೃತ್ತರಾಗಿರುವ ರೋಜರ್ ಫೆಡರರ್ ಅವರಿಗಿಂತ ಮೂರು ಪ್ರಶಸ್ತಿಗಳ ಮುಂದಿದ್ದಾರೆ.

ರೊಲ್ಯಾಂಡ್ ಗ್ಯಾರೋಸ್‌ನಲ್ಲಿ 14 ಬಾರಿ ಚಾಂಪಿಯನ್ ಆಗಿರುವ ನಡಾಲ್ ಗಾಯದ ಕಾರಣ ಈ ಬಾರಿ ಆಡುತ್ತಿಲ್ಲ. ಜೊಕೊವಿಕ್ 2016 ಮತ್ತು 2021ರಲ್ಲಿಯೂ ಪ್ರಶಸ್ತಿ ಗೆದ್ದಿದ್ದರು. ಹತ್ತು ಆಸ್ಟ್ರೇಲಿಯನ್ ಓಪನ್‌ಗಳು, ಏಳು ವಿಂಬಲ್ಡನ್ ಮತ್ತು ಮೂರು ಯುಎಸ್ ಓಪನ್‌ಗಳನ್ನು ಗೆದ್ದಿದ್ದಾರೆ.

ನೊವಾಕ್ ಜೊಕೊವಿಕ್ ಮತ್ತೊಮ್ಮೆ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಗ್ರ್ಯಾಂಡ್ ಸ್ಲಾಮ್‌ಗಳನ್ನು ಗೆಲ್ಲುವ ಹಾದಿಯಲ್ಲಿದ್ದಾರೆ. ರಾಡ್ ಲೇವರ್ ಈ ಸಾಧನೆಯನ್ನು 1969ರಲ್ಲಿ ಮಾಡಿದ್ದರು. ಅದನ್ನು ಯಾರೂ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಜೊಕೊವಿಕ್ 2021ರಲ್ಲಿ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಗೆಲ್ಲುವ ಮೂಲಕ ಹತ್ತಿರ ಬಂದರು. ಆದರೆ ಯುಎಸ್ ಓಪನ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಸೋತಿದ್ದರು.

ವಿಂಬಲ್ಡನ್ ಜುಲೈ 3 ರಿಂದ ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ ನಡೆಯಲಿದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಪಡೆಯದ ಕಾರಣ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಮತ್ತು ಯುಎಸ್ ಓಪನ್ ಆಡಲು ಸಾಧ್ಯವಾಗಲಿಲ್ಲ.

ಏನೇ ಆದರೂ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗಣ್ಯರು ಅಭಿನಂದನೆಗಳ ಹೊಳೆ ಹರಿಸಿದ್ದಾರೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ನೊವಾಕ್ ಜೊಕೊವಿಕ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನೊವಾಕ್ ಜೊಕೊವಿಕ್ ಸೆರ್ಬಿಯಾ, ಭಾರತ ಮತ್ತು ಪ್ರಪಂಚದಾದ್ಯಂತ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಆಗಿದ್ದಾರೆ. ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಪ್ರಶಂಸೆ ಮಾಡಿದ್ದಾರೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

4 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

4 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

17 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

18 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

18 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

19 hours ago