ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಅದರಲ್ಲೂ ವಿಕೇಂಡ್ ಎಂಜಾಯ್ ಮಾಡಲು ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಜನ: ಬೆಳ್ಳಂ ಬೆಳಗ್ಗೆ ಬೆಟ್ಟದುದ್ದಕ್ಕೂ ಫುಲ್ ಟ್ರಾಫಿಕ್ ಜಾಮ್: ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ‌ಮನಸೋತ ಪ್ರಕೃತಿ ಪ್ರೇಮಿಗಳು

ಇಂದು ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಹಾಗಾಗಿ ಸ್ನೇಹಿತರು ಮತ್ತು ಕುಟುಂಬಸ್ಥರು, ಬಡವರ ಪಾಲಿನ ಊಟಿ ಎಂದೇ ಪ್ರಖ್ಯಾತಿ ಪಡೆದಿರುವ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ‌. ಪ್ರಕೃತಿ ಸೌಂದರ್ಯಕ್ಕೆ ಮನಸೋತು ಮೈ ಚಳಿ ಬಿಟ್ಟು ಕುಣಿದು ಕುಪ್ಪಳಿಸಿದ್ದಾರೆ.

ಹೌದು, ಇಂದು ಸ್ನೇಹಿತರ ದಿನಾಚರಣೆ ಜೊತೆಗೆ ಭೀಮನ ಅಮಾವಾಸ್ಯೆ. ಹಾಗಾಗಿ ಕುಟುಂಬಸ್ಥರು ಮತ್ತು ಸ್ನೇಹಿತರು ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ.  ಮುಂಜಾನೆ  5 ಗಂಟೆಗೆ ಬೆಟ್ಟದ ತಪ್ಪಲಿಗೆ ಆಗಮಿಸಿದ ಜನರು ಒಂದು ಗಂಟೆ ಸುತ್ತಮುತ್ತಲಿನ ವಾತಾವರಣದಲ್ಲಿ ಕಾಲಕಳೆದರು. ನಂತರ 6 ಗಂಟೆಯಿಂದ ನಂದಿಗಿರಿಧಾಮಕ್ಕೆ ಪ್ರವೇಶ ಆರಂಭ ಆಗುತ್ತಿದ್ದಂತೆ ಏಕಾಏಕಿ ವಾಹನಗಳು ಬೆಟ್ಟ ಏರಲು ಪ್ರಾರಂಭಿಸಿದವು. ಈ ವೇಳೆ‌ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿ ಎರಡು ನಿಮಿಷಕ್ಕೆ ಒಂದು ಬಾರಿ ಟ್ರಾಫಿಕ್ ಜಾಮ್ ಎದುರಾಗುತ್ತಿತ್ತು. ಇನ್ನೂ ನಂದಿಗಿರಿಧಾಮದ ಸೆಲ್ಫಿ ಗ್ಯಾಲರಿಯಲ್ಲಿ ನಿಂತು ಸೂರ್ಯೋದಯ ನೋಡುವುದೇ ಇಲ್ಲಿ ಫೇಮಸ್. ಆದರೆ ಇಂದು ಮೋಡ ಕವಿದ ವಾತಾವರಣ ಇದ್ದ ಕಾರಣ ಸೂರ್ಯೋದಯ ಕಾಣದೆ ಪ್ರವಾಸಿಗರು ನಿರಾಸೆ ಅನುಭವಿಸಿದರು.

ಇನ್ನು ಇಂದು ವೀಕೆಂಡ್ ಆಗಿದ್ದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ನಂದಿಗಿರಿಧಾಮದ ಪಾರ್ಕಿಂಗ್ ಫುಲ್ ಆಗಿತ್ತು. ಸ್ನೇಹಿತರು, ಪ್ರೇಮಿಗಳು, ಕುಟುಂಬಸ್ಥರು ಬೆಟ್ಟದಲ್ಲಿ ಪ್ರಕೃತಿ ಸೌಂದರ್ಯಕ್ಕೆ ಮನಸೋತರು. ಎಲ್ಲಿ ನೋಡಿದರೂ ಸೆಲ್ಪಿ ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು. ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಿದ ಹಿನ್ನೆಲೆ ನಂದಿಗಿರಿಧಾಮದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಜಡಿ ಮಳೆಗೆ ಮಳೆಯ ಹನಿಗಳು ಬೀಳುತ್ತಿದ್ದಂತೆ ನಂದಿಗಿರಿಧಾಮ ಕರಾವಳಿ ಭಾಗದ ಸೌಂದರ್ಯವೂ ನಾಚುವಂತೆ ಇತ್ತು. ಟಿಪ್ಪು ಡ್ರಾಪ್, ಸೆಲ್ಫಿ ಗ್ಯಾಲರಿ ಬಳಿ ಎಲ್ಲಿ ನೋಡಿದರೂ ಜನವೋ ಜನ. ಮೊದಲ ಬಾರಿ ಬಂದ ಪ್ರವಾಸಿಗರು ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಫುಲ್ ಫಿದಾ ಆಗಿ ಒಂದು ಕ್ಷಣ ಮೈ ಮರೆತರು.

ಒಟ್ಟಾರೆ ಸ್ನೇಹಿತರ ದಿನಾಚರಣೆ ದಿನ ಸ್ನೇಹಿತರೆಲ್ಲರೂ ಪ್ರಕೃತಿ ಸೌಂದರ್ಯದ ಜೊತೆಯಲ್ಲಿ ಕಾಲ ಕಳೆದರು. ಮೊದಲ ಬಾರಿಗೆ ಇಲ್ಲಿಗೆ ಬಂದವರು ಸೂರ್ಯೋದಯ ನೋಡಲು ಬೇಸರ ಆಗಿದ್ದು ಬಿಟ್ಟರೆ ಎಲ್ಲರೂ ಮೈ ಮರೆತು ಪ್ರಕೃತಿ ಸೊಬಗನ್ನ ಸವಿದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

1 hour ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

12 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago