ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಅದರಲ್ಲೂ ವಿಕೇಂಡ್ ಎಂಜಾಯ್ ಮಾಡಲು ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಜನ: ಬೆಳ್ಳಂ ಬೆಳಗ್ಗೆ ಬೆಟ್ಟದುದ್ದಕ್ಕೂ ಫುಲ್ ಟ್ರಾಫಿಕ್ ಜಾಮ್: ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ‌ಮನಸೋತ ಪ್ರಕೃತಿ ಪ್ರೇಮಿಗಳು

ಇಂದು ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಹಾಗಾಗಿ ಸ್ನೇಹಿತರು ಮತ್ತು ಕುಟುಂಬಸ್ಥರು, ಬಡವರ ಪಾಲಿನ ಊಟಿ ಎಂದೇ ಪ್ರಖ್ಯಾತಿ ಪಡೆದಿರುವ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ‌. ಪ್ರಕೃತಿ ಸೌಂದರ್ಯಕ್ಕೆ ಮನಸೋತು ಮೈ ಚಳಿ ಬಿಟ್ಟು ಕುಣಿದು ಕುಪ್ಪಳಿಸಿದ್ದಾರೆ.

ಹೌದು, ಇಂದು ಸ್ನೇಹಿತರ ದಿನಾಚರಣೆ ಜೊತೆಗೆ ಭೀಮನ ಅಮಾವಾಸ್ಯೆ. ಹಾಗಾಗಿ ಕುಟುಂಬಸ್ಥರು ಮತ್ತು ಸ್ನೇಹಿತರು ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ.  ಮುಂಜಾನೆ  5 ಗಂಟೆಗೆ ಬೆಟ್ಟದ ತಪ್ಪಲಿಗೆ ಆಗಮಿಸಿದ ಜನರು ಒಂದು ಗಂಟೆ ಸುತ್ತಮುತ್ತಲಿನ ವಾತಾವರಣದಲ್ಲಿ ಕಾಲಕಳೆದರು. ನಂತರ 6 ಗಂಟೆಯಿಂದ ನಂದಿಗಿರಿಧಾಮಕ್ಕೆ ಪ್ರವೇಶ ಆರಂಭ ಆಗುತ್ತಿದ್ದಂತೆ ಏಕಾಏಕಿ ವಾಹನಗಳು ಬೆಟ್ಟ ಏರಲು ಪ್ರಾರಂಭಿಸಿದವು. ಈ ವೇಳೆ‌ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿ ಎರಡು ನಿಮಿಷಕ್ಕೆ ಒಂದು ಬಾರಿ ಟ್ರಾಫಿಕ್ ಜಾಮ್ ಎದುರಾಗುತ್ತಿತ್ತು. ಇನ್ನೂ ನಂದಿಗಿರಿಧಾಮದ ಸೆಲ್ಫಿ ಗ್ಯಾಲರಿಯಲ್ಲಿ ನಿಂತು ಸೂರ್ಯೋದಯ ನೋಡುವುದೇ ಇಲ್ಲಿ ಫೇಮಸ್. ಆದರೆ ಇಂದು ಮೋಡ ಕವಿದ ವಾತಾವರಣ ಇದ್ದ ಕಾರಣ ಸೂರ್ಯೋದಯ ಕಾಣದೆ ಪ್ರವಾಸಿಗರು ನಿರಾಸೆ ಅನುಭವಿಸಿದರು.

ಇನ್ನು ಇಂದು ವೀಕೆಂಡ್ ಆಗಿದ್ದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ನಂದಿಗಿರಿಧಾಮದ ಪಾರ್ಕಿಂಗ್ ಫುಲ್ ಆಗಿತ್ತು. ಸ್ನೇಹಿತರು, ಪ್ರೇಮಿಗಳು, ಕುಟುಂಬಸ್ಥರು ಬೆಟ್ಟದಲ್ಲಿ ಪ್ರಕೃತಿ ಸೌಂದರ್ಯಕ್ಕೆ ಮನಸೋತರು. ಎಲ್ಲಿ ನೋಡಿದರೂ ಸೆಲ್ಪಿ ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು. ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಿದ ಹಿನ್ನೆಲೆ ನಂದಿಗಿರಿಧಾಮದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಜಡಿ ಮಳೆಗೆ ಮಳೆಯ ಹನಿಗಳು ಬೀಳುತ್ತಿದ್ದಂತೆ ನಂದಿಗಿರಿಧಾಮ ಕರಾವಳಿ ಭಾಗದ ಸೌಂದರ್ಯವೂ ನಾಚುವಂತೆ ಇತ್ತು. ಟಿಪ್ಪು ಡ್ರಾಪ್, ಸೆಲ್ಫಿ ಗ್ಯಾಲರಿ ಬಳಿ ಎಲ್ಲಿ ನೋಡಿದರೂ ಜನವೋ ಜನ. ಮೊದಲ ಬಾರಿ ಬಂದ ಪ್ರವಾಸಿಗರು ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಫುಲ್ ಫಿದಾ ಆಗಿ ಒಂದು ಕ್ಷಣ ಮೈ ಮರೆತರು.

ಒಟ್ಟಾರೆ ಸ್ನೇಹಿತರ ದಿನಾಚರಣೆ ದಿನ ಸ್ನೇಹಿತರೆಲ್ಲರೂ ಪ್ರಕೃತಿ ಸೌಂದರ್ಯದ ಜೊತೆಯಲ್ಲಿ ಕಾಲ ಕಳೆದರು. ಮೊದಲ ಬಾರಿಗೆ ಇಲ್ಲಿಗೆ ಬಂದವರು ಸೂರ್ಯೋದಯ ನೋಡಲು ಬೇಸರ ಆಗಿದ್ದು ಬಿಟ್ಟರೆ ಎಲ್ಲರೂ ಮೈ ಮರೆತು ಪ್ರಕೃತಿ ಸೊಬಗನ್ನ ಸವಿದರು.

Ramesh Babu

Journalist

Recent Posts

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

1 hour ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

10 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

11 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

12 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

12 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

16 hours ago