ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಅದರಲ್ಲೂ ವಿಕೇಂಡ್ ಎಂಜಾಯ್ ಮಾಡಲು ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಜನ: ಬೆಳ್ಳಂ ಬೆಳಗ್ಗೆ ಬೆಟ್ಟದುದ್ದಕ್ಕೂ ಫುಲ್ ಟ್ರಾಫಿಕ್ ಜಾಮ್: ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ‌ಮನಸೋತ ಪ್ರಕೃತಿ ಪ್ರೇಮಿಗಳು

ಇಂದು ಫ್ರೆಂಡ್ ಶಿಪ್ ಡೇ ಮತ್ತು ಭೀಮನ ಅಮಾವಾಸ್ಯೆ ಹಾಗಾಗಿ ಸ್ನೇಹಿತರು ಮತ್ತು ಕುಟುಂಬಸ್ಥರು, ಬಡವರ ಪಾಲಿನ ಊಟಿ ಎಂದೇ ಪ್ರಖ್ಯಾತಿ ಪಡೆದಿರುವ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ‌. ಪ್ರಕೃತಿ ಸೌಂದರ್ಯಕ್ಕೆ ಮನಸೋತು ಮೈ ಚಳಿ ಬಿಟ್ಟು ಕುಣಿದು ಕುಪ್ಪಳಿಸಿದ್ದಾರೆ.

ಹೌದು, ಇಂದು ಸ್ನೇಹಿತರ ದಿನಾಚರಣೆ ಜೊತೆಗೆ ಭೀಮನ ಅಮಾವಾಸ್ಯೆ. ಹಾಗಾಗಿ ಕುಟುಂಬಸ್ಥರು ಮತ್ತು ಸ್ನೇಹಿತರು ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ.  ಮುಂಜಾನೆ  5 ಗಂಟೆಗೆ ಬೆಟ್ಟದ ತಪ್ಪಲಿಗೆ ಆಗಮಿಸಿದ ಜನರು ಒಂದು ಗಂಟೆ ಸುತ್ತಮುತ್ತಲಿನ ವಾತಾವರಣದಲ್ಲಿ ಕಾಲಕಳೆದರು. ನಂತರ 6 ಗಂಟೆಯಿಂದ ನಂದಿಗಿರಿಧಾಮಕ್ಕೆ ಪ್ರವೇಶ ಆರಂಭ ಆಗುತ್ತಿದ್ದಂತೆ ಏಕಾಏಕಿ ವಾಹನಗಳು ಬೆಟ್ಟ ಏರಲು ಪ್ರಾರಂಭಿಸಿದವು. ಈ ವೇಳೆ‌ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿ ಎರಡು ನಿಮಿಷಕ್ಕೆ ಒಂದು ಬಾರಿ ಟ್ರಾಫಿಕ್ ಜಾಮ್ ಎದುರಾಗುತ್ತಿತ್ತು. ಇನ್ನೂ ನಂದಿಗಿರಿಧಾಮದ ಸೆಲ್ಫಿ ಗ್ಯಾಲರಿಯಲ್ಲಿ ನಿಂತು ಸೂರ್ಯೋದಯ ನೋಡುವುದೇ ಇಲ್ಲಿ ಫೇಮಸ್. ಆದರೆ ಇಂದು ಮೋಡ ಕವಿದ ವಾತಾವರಣ ಇದ್ದ ಕಾರಣ ಸೂರ್ಯೋದಯ ಕಾಣದೆ ಪ್ರವಾಸಿಗರು ನಿರಾಸೆ ಅನುಭವಿಸಿದರು.

ಇನ್ನು ಇಂದು ವೀಕೆಂಡ್ ಆಗಿದ್ದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ನಂದಿಗಿರಿಧಾಮದ ಪಾರ್ಕಿಂಗ್ ಫುಲ್ ಆಗಿತ್ತು. ಸ್ನೇಹಿತರು, ಪ್ರೇಮಿಗಳು, ಕುಟುಂಬಸ್ಥರು ಬೆಟ್ಟದಲ್ಲಿ ಪ್ರಕೃತಿ ಸೌಂದರ್ಯಕ್ಕೆ ಮನಸೋತರು. ಎಲ್ಲಿ ನೋಡಿದರೂ ಸೆಲ್ಪಿ ತೆಗೆದುಕೊಳ್ಳುವುದು ಸಾಮಾನ್ಯವಾಗಿತ್ತು. ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಿದ ಹಿನ್ನೆಲೆ ನಂದಿಗಿರಿಧಾಮದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಜಡಿ ಮಳೆಗೆ ಮಳೆಯ ಹನಿಗಳು ಬೀಳುತ್ತಿದ್ದಂತೆ ನಂದಿಗಿರಿಧಾಮ ಕರಾವಳಿ ಭಾಗದ ಸೌಂದರ್ಯವೂ ನಾಚುವಂತೆ ಇತ್ತು. ಟಿಪ್ಪು ಡ್ರಾಪ್, ಸೆಲ್ಫಿ ಗ್ಯಾಲರಿ ಬಳಿ ಎಲ್ಲಿ ನೋಡಿದರೂ ಜನವೋ ಜನ. ಮೊದಲ ಬಾರಿ ಬಂದ ಪ್ರವಾಸಿಗರು ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಫುಲ್ ಫಿದಾ ಆಗಿ ಒಂದು ಕ್ಷಣ ಮೈ ಮರೆತರು.

ಒಟ್ಟಾರೆ ಸ್ನೇಹಿತರ ದಿನಾಚರಣೆ ದಿನ ಸ್ನೇಹಿತರೆಲ್ಲರೂ ಪ್ರಕೃತಿ ಸೌಂದರ್ಯದ ಜೊತೆಯಲ್ಲಿ ಕಾಲ ಕಳೆದರು. ಮೊದಲ ಬಾರಿಗೆ ಇಲ್ಲಿಗೆ ಬಂದವರು ಸೂರ್ಯೋದಯ ನೋಡಲು ಬೇಸರ ಆಗಿದ್ದು ಬಿಟ್ಟರೆ ಎಲ್ಲರೂ ಮೈ ಮರೆತು ಪ್ರಕೃತಿ ಸೊಬಗನ್ನ ಸವಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

17 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

22 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

24 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago