ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಹಲವು ಜಿಲ್ಲೆಗಳಿಗೆ ತಟ್ಟಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸದ್ಯ ಈಗ ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲ ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿತ್ತು. ಇದರಿಂದ ಜನ ತತ್ತರಿಸಿಹೋಗಿದ್ದರು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ತಮಿಳು ನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರ ಪ್ರಭಾವ ದೊಡ್ಡಬಳ್ಳಾಪುರಕ್ಕೂ ತಟ್ಟಿದ್ದು, ಜನರು ಕೊಡೆ ಹಿಡಿದು ಮತ್ತದೇ ಮಳೆಗೆ ನಲುಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯಿಂದ ಎಚ್ಚರಿಕೆ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…