ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನ ಉದ್ಘಾಟಿಸಿ ಅವರು ಮಾತನಾಡಿ, ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಬಂಟರು, ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಜನ ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಿಡಿದ್ದು ತಾವು ಹೋಗುವ ಕಡೆ ಎಲ್ಲರ ಜತೆಗೂ ಬೆರೆತು, ಸಹೃದಯತೆಯಿಂದ ಬೆರೆಯುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಹೇಳಿದರು.
ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…