ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನ ಉದ್ಘಾಟಿಸಿ ಅವರು ಮಾತನಾಡಿ, ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಬಂಟರು, ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಜನ ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಿಡಿದ್ದು ತಾವು ಹೋಗುವ ಕಡೆ ಎಲ್ಲರ ಜತೆಗೂ ಬೆರೆತು, ಸಹೃದಯತೆಯಿಂದ ಬೆರೆಯುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಹೇಳಿದರು.
ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…