ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನ ಉದ್ಘಾಟಿಸಿ ಅವರು ಮಾತನಾಡಿ, ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಬಂಟರು, ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಜನ ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಿಡಿದ್ದು ತಾವು ಹೋಗುವ ಕಡೆ ಎಲ್ಲರ ಜತೆಗೂ ಬೆರೆತು, ಸಹೃದಯತೆಯಿಂದ ಬೆರೆಯುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಹೇಳಿದರು.
ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…