ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…