ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…