ದೊಡ್ಡಬಳ್ಳಾಪುರ: ಬಕ್ರೀದ್ ಹಬ್ಬದ ಹಿನ್ನೆಲೆ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಹಸುಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿರುವ ಘಟನೆ ಮೇ.27ರ ರಾತ್ರಿ ನಡೆದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬಕ್ರೀದ್ ಹಬ್ಬದ ಹಿನ್ನೆಲೆ ಠಾಣಾ ವ್ಯಾಪ್ತಿಯ ಕಂಟನಕುಂಟೆ ಸಮೀಪ ಚೆಕ್ಪೋಸ್ಟ್ ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಸಾಗುತ್ತಿದ್ದ ವಾಹನವನ್ನು ತಪಾಸಣೆ ಮಾಡಿದಾಗ, ನಾಲ್ಕು ಹಸುಗಳನ್ನು ಕಸಾಯಿಖಾನೆಗೆ ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಹಸುಗಳನ್ನು ಸಾಗಾಟ ಮಾಡಲಾಗುತ್ತಿದ್ದು, ಈ ಸಂಬಂಧ ದೊಡ್ಡಬಳ್ಳಾಪುರ ತಾಲೂಕಿನ ರಾಜೀವ್ ಗಾಂಧಿ ಬಡಾವಣೆಯ ಯತೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪ್ರತಿ ಹಸುವಿನ ಮೌಲ್ಯ ಅಂದಾಜು ₹50 ಸಾವಿರಕ್ಕೂ ಅಧಿಕ ಎಂದು ತಿಳಿದುಬಂದಿದೆ. ರಕ್ಷಣೆ ಮಾಡಲಾದ ಹಸುಗಳನ್ನು ಬಳಿಕ ಗೋಶಾಲೆಗೆ ರವಾನೆ ಮಾಡಲಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…