ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ-ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು, ಕರು, ಎತ್ತು, ಹೋರಿ ಹಾಗೂ ಎಮ್ಮೆ ಮುಂತಾದ ಗೋವಾಂಶಾಧಿ ಜಾನುವಾರುಗಳ ಹತ್ಯೆಗಳು, ಹಾಗೇ ಇಂತಹ ಸಂದರ್ಭದಲ್ಲಿ ಪ್ರಾಣಿಗಳ ಕಳ್ಳ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು, ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ.

ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago