ಬಕ್ರೀದ್ ಪ್ರಯುಕ್ತ ಒಂಟೆ, ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ- ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಆದೇಶ

ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವದು ಅಪರಾಧವಾಗಿದ್ದು, ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿರುತ್ತದೆ. ಆದ್ದರಿಂದ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು. ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿರುತ್ತದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಎಚ್ಚರಿಕೆ ನೀಡಿದ್ದಾರೆ.

ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
ಕಾನೂನು ಬಾಹಿರವಾಗಿ ಯಾರಾದರೂ ಒಂಟೆ/ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

9 hours ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

21 hours ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 day ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

2 days ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago