ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವದು ಅಪರಾಧವಾಗಿದ್ದು, ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿರುತ್ತದೆ. ಆದ್ದರಿಂದ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು. ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿರುತ್ತದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಎಚ್ಚರಿಕೆ ನೀಡಿದ್ದಾರೆ.
ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.
ಕಾನೂನು ಬಾಹಿರವಾಗಿ ಯಾರಾದರೂ ಒಂಟೆ/ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ, ಪೊಲೀಸ್ ಹಾಗೂ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳಿಗೆ ಮಾಹಿತಿಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…