ಜೂನ್ 29ರಂದು ನಡೆಯಲಿರುವ ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಬ್ಬವನ್ನು ಶಾಂತಿ, ಸಂತೋಷವಾಗಿ ಆಚರಣೆ ಮಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಎಲ್ಲಾ ಧರ್ಮಗಳು ಶಾಂತಿ-ಸುವ್ಯವಸ್ಥೆ, ಅಹಿಂಸೆ, ಸಹಬಾಳ್ವೆ, ಸೌಹಾರ್ದ ಸೇರಿದಂತೆ ಒಳ್ಳೆ ಗುಣಗಳನ್ನು ಹೇಳುತ್ತವೆ. ಅಂತಹ ಒಳ್ಳೆ ಗುಣಗಳನ್ನು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಹೋದರೆ ನಮ್ಮ ಅಭಿವೃದ್ಧಿ ಜೊತೆಗೆ ಸಮಾಜನೂ ಅಭಿವೃದ್ಧಿ ಆಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ನಗರದ ಬಸವ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು, ಸಮಾಜದಲ್ಲಿ ಸಣ್ಣ ತಪ್ಪು ನಡೆದರೂ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು, ಯಾರೂ ಸಹ ಕಾನೂನು ಉಲ್ಲಂಘನೆ ಮಾಡಬಾರದು ಎಂದು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಆನೇಕಲ್ ತಾಲೂಕಿನ ಎಲ್ಲಾ ಧರ್ಮಗಳ ಮುಖಂಡರ ಸಲಹೆ, ಸೂಚನೆಗಳನ್ನು ಪಡೆದುಕೊಂಡು ಪೊಲೀಸ್ ಭದ್ರತೆ ಯಾವ ರೀತಿ ಅಳವಡಿಸಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿದೆ ಎಂದರು.
ಬಕ್ರೀದ್ ಹಬ್ಬದಂದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎರಡು ಕೆಎಸ್ಆರ್ ಪಿ ತುಕಡಿ, 200 ಮಂದಿ ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನ ಹೆಚ್ಚುವರಿಯಾಗಿ ನಿಯೋಜನೆ ಮಾಡಲಾಗುತ್ತದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ ಎಂದರು.
ಈ ವೇಳೆ ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್ಪಿ ನಾಗರಾಜ್, ಗ್ರಾಮಾಂತರ ಜಿಲ್ಲೆಯ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…