ಜೂನ್ 29ರಂದು ನಡೆಯಲಿರುವ ಬಕ್ರೀದ್ ಹಬ್ಬ ದಾನ ಧರ್ಮದ ಹಬ್ಬವಾಗಿದ್ದು, ಹಬ್ಬವನ್ನು ಶಾಂತಿ, ಸಂತೋಷವಾಗಿ ಆಚರಣೆ ಮಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಎಲ್ಲಾ ಧರ್ಮಗಳು ಶಾಂತಿ-ಸುವ್ಯವಸ್ಥೆ, ಅಹಿಂಸೆ, ಸಹಬಾಳ್ವೆ, ಸೌಹಾರ್ದ ಸೇರಿದಂತೆ ಒಳ್ಳೆ ಗುಣಗಳನ್ನು ಹೇಳುತ್ತವೆ. ಅಂತಹ ಒಳ್ಳೆ ಗುಣಗಳನ್ನು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಹೋದರೆ ನಮ್ಮ ಅಭಿವೃದ್ಧಿ ಜೊತೆಗೆ ಸಮಾಜನೂ ಅಭಿವೃದ್ಧಿ ಆಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ನಗರದ ಬಸವ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು, ಸಮಾಜದಲ್ಲಿ ಸಣ್ಣ ತಪ್ಪು ನಡೆದರೂ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು, ಯಾರೂ ಸಹ ಕಾನೂನು ಉಲ್ಲಂಘನೆ ಮಾಡಬಾರದು ಎಂದು ಮನವಿ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಆನೇಕಲ್ ತಾಲೂಕಿನ ಎಲ್ಲಾ ಧರ್ಮಗಳ ಮುಖಂಡರ ಸಲಹೆ, ಸೂಚನೆಗಳನ್ನು ಪಡೆದುಕೊಂಡು ಪೊಲೀಸ್ ಭದ್ರತೆ ಯಾವ ರೀತಿ ಅಳವಡಿಸಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸದಾ ಸನ್ನದ್ಧವಾಗಿದೆ ಎಂದರು.
ಬಕ್ರೀದ್ ಹಬ್ಬದಂದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎರಡು ಕೆಎಸ್ಆರ್ ಪಿ ತುಕಡಿ, 200 ಮಂದಿ ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನ ಹೆಚ್ಚುವರಿಯಾಗಿ ನಿಯೋಜನೆ ಮಾಡಲಾಗುತ್ತದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ ಎಂದರು.
ಈ ವೇಳೆ ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್ಪಿ ನಾಗರಾಜ್, ಗ್ರಾಮಾಂತರ ಜಿಲ್ಲೆಯ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…