ಹಬ್ಬ ಆಚರಣೆಗಳು ಶಾಂತಿ, ಸಹಬಾಳ್ವೆ, ಸೌಹಾರ್ದತೆಯಿಂದ ಒಳಗೊಂಡಿರಬೇಕು. ಯಾರೂ ಸಹ ಕಾನೂನು ಎಲ್ಲೆ ಮೀರಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತೆ ನಡೆದುಕೊಳ್ಳುವವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಬೆಂ.ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು.
ಬಕ್ರೀದ್ ಹಬ್ಬ ಪ್ರಯುಕ್ತ ಪೊಲೀಸ್ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ನಗರದ ಎಜಿಎಂ ಭವನದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಸಮುದಾಯದವರ ಸಹಕಾರ ಅಗತ್ಯವಿದೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ಕೂಡಲೇ ನೀಡಬೇಕು ಎಂದು ತಿಳಿಸಿದರು.
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಜೊತೆಗೆ ಶಾಂತಿ ಭಂಗ ಮಾಡದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕಾನೂನು ಉಲ್ಲಂಘಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಸಮಾಜದ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಇಲಾಖೆಯಿಂದ ಸಂಪೂರ್ಣ ಬೆಂಬಲವಿದೆ ಎಂದರು.
112 ವಾಹನ, ರಾತ್ರಿಗಸ್ತುಗೆ ಪೊಲೀಸ್ ಸಿಬ್ಬಂದಿ ನಿಯೋಜನೆ, ಚೆಕ್ ಪೋಸ್ಟ್ ಗಳನ್ನು ಅಹ ಹಾಕಲಾಗಿದೆ. ಅದೇರೀತಿ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣೀಡಲಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…