Categories: ಕೋಲಾರ

ಬಗರ್ ಹುಕುಂ, ಅರಣ್ಯ ಸಾಗುವಳಿ ಭೂಮಿ ಒತ್ತುವರಿ ನಿಲ್ಲಿಸಲು ಒತ್ತಾಯ

ಕೋಲಾರ: ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿಯಿಂದ ಭೂಮಿ ಪಡೆದ ರೈತರಿಗೆ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ನೀಡುತ್ತಿರುವ ಕಿರುಕುಳ ಕೂಡಲೇ ನಿಲ್ಲಬೇಕು ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ನೇತೃತ್ವದಲ್ಲಿ ಏ‌15 ರಂದು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಟಿ.ಎಂ ವೆಂಕಟೇಶ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೂಡಲೇ ಜಿಲ್ಲಾಡಳಿತ ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು. ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್ಸು ನೀಡಬೇಕು. ಅರಣ್ಯ ಇಂಡೀಕರಣದ ಹೆಸರಿನಲ್ಲಿ ನೀಡುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ನೋಟೀಸ್ ನೀಡುವುದು ನಿಲ್ಲಬೇಕು, ನೀಡಿರುವ ನೋಟೀಸ್ ಗಳನ್ನು ವಾಪಸ್ಸು ಪಡೆಯಬೇಕು. ತಕ್ಷಣ ಎಲ್ಲಾ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ತಕ್ಷಣ ಹಕ್ಕುಪತ್ರ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ಕೃಷಿ ಪಂಪಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಬಾರದು, ಕೃಷಿ ಪಂಪ್ ಸೆಟ್ ಗಳ ಸ್ವಯಂ ವೆಚ್ಚ ಯೋಜನೆ ಹಿಂಪೆಡೆಯಬೇಕು, ವಿದ್ಯುತ್ ಖಾಸಗೀಕರಣ ಪ್ರಯತ್ನ ಕೂಡಲೇ ನಿಲ್ಲಿಸಬೇಕು ಚನ್ನರಾಯಪಟ್ಟಣ ಕೆಐಎಡಿಬಿಯ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ರದ್ದುಪಡಿಸಬೇಕು ರೈತ ವಿರೋಧಿ ಕಾರ್ಪೋರೇಟ್ ಪರ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ನೀತಿಯನ್ನು ಪಂಜಾಬ್ ಮಾದರಿಯಲ್ಲಿ ತಿರಸ್ಕರಿಸಬೇಕು ರೈತರ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯಪ್ರವೇಶಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ರೂ ಗಳ ಅವರ್ತ ನಿಧಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು. ಕೆಲಸದ ದಿನಗಳು 200 ದಿನಕ್ಕೆ ಹೆಚ್ಚಿಸಬೇಕು. ಕೃಷಿ ಕೂಲಿಕಾರರ ಸಮಗ್ರ ರಕ್ಷಣೆಯ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ತರಬೇಕು.
ಕಾರ್ಮಿಕ ಕಾನೂನುಗಳನ್ನು ನಾಶ ಮಾಡುವ ನಾಲ್ಕು ಕಾರ್ಮಿಕ ಸಂಹಿತೆ ತಿರಸ್ಕರಿಸಬೇಕು, ಕನಿಷ್ಠ ದುಡಿಮೆ ಅವಧಿ 12 ಗಂಟೆಗಳಿಗೆ ಹೆಚ್ಚಿಸಿರುವ ಅದೇಶ ವಾಪಸ್ಸು ಪಡೆಯಬೇಕು ದಲಿತರ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು, ಎಸ್ ಸಿ ಎಸ್ ಪಿ / ಟಿ ಎಸ್ ಪಿ ಅನುದಾನ ದುರ್ಬಳಕೆ ನಿಲ್ಲಬೇಕು ಬಗರ್ ಹುಕುಂ ರೈತರ ಮೇಲೆ ಗೊಂಡಾವರ್ತನೆ ತೋರಿರುವ ಗುಬ್ಬಿ ಕಾಂಗ್ರೆಸ್ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾಳ ಕೃಷಿ ಕಾಯ್ದೆಗಳು ,ಭೂ ಸ್ವಾಧೀನ ಕಾಯ್ದೆಗಳನ್ನು ರದ್ದುಪಡಿಸಬೇಕು ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ-ಯುವಜನ ಪರವಾದ ಪರ್ಯಾಯ ನೀತಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಆ,೧೫ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಸಂಯುಕ್ತ ಹೋರಾಟ ಕರ್ನಾಟಕ ಕೋಲಾರ ಜಿಲ್ಲಾ ಸಮಿತಿಯ ಮುಖಂಡರಾದ ವಿಜಯಕೃಷ್ಣ, ಚಿನ್ನಾಪುರ ಮಂಜುನಾಥ, ಭೀಮರಾಜ್, ಸೀಸಂದ್ರ ವೆಂಕಟಾಚಲಪತಿ, ರಾಮಚಂದ್ರ, ರಾಜಪ್ಪ, ವೆಂಕಟೇಶಪ್ಪ ಮುಂತಾದವರು ಹಾಜರಿದ್ದರು

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago