Categories: ಕೋಲಾರ

ಬಗರ್ ಹುಕುಂ, ಅರಣ್ಯ ಸಾಗುವಳಿ ಭೂಮಿ ಒತ್ತುವರಿ ನಿಲ್ಲಿಸಲು ಒತ್ತಾಯ

ಕೋಲಾರ: ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿಯಿಂದ ಭೂಮಿ ಪಡೆದ ರೈತರಿಗೆ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ನೀಡುತ್ತಿರುವ ಕಿರುಕುಳ ಕೂಡಲೇ ನಿಲ್ಲಬೇಕು ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ನೇತೃತ್ವದಲ್ಲಿ ಏ‌15 ರಂದು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಟಿ.ಎಂ ವೆಂಕಟೇಶ್ ತಿಳಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೂಡಲೇ ಜಿಲ್ಲಾಡಳಿತ ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು. ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್ಸು ನೀಡಬೇಕು. ಅರಣ್ಯ ಇಂಡೀಕರಣದ ಹೆಸರಿನಲ್ಲಿ ನೀಡುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ನೋಟೀಸ್ ನೀಡುವುದು ನಿಲ್ಲಬೇಕು, ನೀಡಿರುವ ನೋಟೀಸ್ ಗಳನ್ನು ವಾಪಸ್ಸು ಪಡೆಯಬೇಕು. ತಕ್ಷಣ ಎಲ್ಲಾ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ತಕ್ಷಣ ಹಕ್ಕುಪತ್ರ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ಕೃಷಿ ಪಂಪಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಬಾರದು, ಕೃಷಿ ಪಂಪ್ ಸೆಟ್ ಗಳ ಸ್ವಯಂ ವೆಚ್ಚ ಯೋಜನೆ ಹಿಂಪೆಡೆಯಬೇಕು, ವಿದ್ಯುತ್ ಖಾಸಗೀಕರಣ ಪ್ರಯತ್ನ ಕೂಡಲೇ ನಿಲ್ಲಿಸಬೇಕು ಚನ್ನರಾಯಪಟ್ಟಣ ಕೆಐಎಡಿಬಿಯ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ರದ್ದುಪಡಿಸಬೇಕು ರೈತ ವಿರೋಧಿ ಕಾರ್ಪೋರೇಟ್ ಪರ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ನೀತಿಯನ್ನು ಪಂಜಾಬ್ ಮಾದರಿಯಲ್ಲಿ ತಿರಸ್ಕರಿಸಬೇಕು ರೈತರ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯಪ್ರವೇಶಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ರೂ ಗಳ ಅವರ್ತ ನಿಧಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು. ಕೆಲಸದ ದಿನಗಳು 200 ದಿನಕ್ಕೆ ಹೆಚ್ಚಿಸಬೇಕು. ಕೃಷಿ ಕೂಲಿಕಾರರ ಸಮಗ್ರ ರಕ್ಷಣೆಯ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ತರಬೇಕು.
ಕಾರ್ಮಿಕ ಕಾನೂನುಗಳನ್ನು ನಾಶ ಮಾಡುವ ನಾಲ್ಕು ಕಾರ್ಮಿಕ ಸಂಹಿತೆ ತಿರಸ್ಕರಿಸಬೇಕು, ಕನಿಷ್ಠ ದುಡಿಮೆ ಅವಧಿ 12 ಗಂಟೆಗಳಿಗೆ ಹೆಚ್ಚಿಸಿರುವ ಅದೇಶ ವಾಪಸ್ಸು ಪಡೆಯಬೇಕು ದಲಿತರ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಲ್ಲಬೇಕು, ಎಸ್ ಸಿ ಎಸ್ ಪಿ / ಟಿ ಎಸ್ ಪಿ ಅನುದಾನ ದುರ್ಬಳಕೆ ನಿಲ್ಲಬೇಕು ಬಗರ್ ಹುಕುಂ ರೈತರ ಮೇಲೆ ಗೊಂಡಾವರ್ತನೆ ತೋರಿರುವ ಗುಬ್ಬಿ ಕಾಂಗ್ರೆಸ್ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾಳ ಕೃಷಿ ಕಾಯ್ದೆಗಳು ,ಭೂ ಸ್ವಾಧೀನ ಕಾಯ್ದೆಗಳನ್ನು ರದ್ದುಪಡಿಸಬೇಕು ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ-ಯುವಜನ ಪರವಾದ ಪರ್ಯಾಯ ನೀತಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಆ,೧೫ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು

ಸಂಯುಕ್ತ ಹೋರಾಟ ಕರ್ನಾಟಕ ಕೋಲಾರ ಜಿಲ್ಲಾ ಸಮಿತಿಯ ಮುಖಂಡರಾದ ವಿಜಯಕೃಷ್ಣ, ಚಿನ್ನಾಪುರ ಮಂಜುನಾಥ, ಭೀಮರಾಜ್, ಸೀಸಂದ್ರ ವೆಂಕಟಾಚಲಪತಿ, ರಾಮಚಂದ್ರ, ರಾಜಪ್ಪ, ವೆಂಕಟೇಶಪ್ಪ ಮುಂತಾದವರು ಹಾಜರಿದ್ದರು

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

8 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

10 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago