Categories: ಕೋಲಾರ

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% ಅನುದಾನಕ್ಕೆ ಎಸ್‌ಎಫ್‌ಐ ಪ್ರತಿಭಟನೆ

ಕೋಲಾರ: ಮುಂಬರಲಿರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಸಂಘಟನೆಯಿಂದ ಮಂಗಳವಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿ ಉಪ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ ಶಿಕ್ಷಣ ಕ್ಷೇತ್ರವು ವಿಶಾಲವಾಗಿ ವ್ಯಾಪಿಸಿದ್ದು ದೇಶ, ವಿದೇಶಗಳಿಂದಲೂ ವಿದ್ಯಾರ್ಥಿಗಳು ಬಂದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಗಣನೀಯವಾಗಿ ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ ಎಂದು ಆರೋಪಿಸಿದರು

ಉನ್ನತ ಶಿಕ್ಷಣ ಉಳ್ಳವರ ಪಾಲಾಗುತ್ತಿದೆ. ರೈತ, ಕಾರ್ಮಿಕ, ದಲಿತ, ಹಿಂದುಳಿದವರ ಮಕ್ಕಳು ಇಂದು ಉನ್ನತ ಶಿಕ್ಷಣವನ್ನು ಪಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಗುಣಮಟ್ಟದ ಶಿಕ್ಷಣ ಸಾರ್ವಜನಿಕ ಸಂಸ್ಥೆಗಳಲ್ಲಿ ಕುಂಟಿತವಾಗುತ್ತಿದೆ. ಸರ್ಕಾರ ಸಾರ್ವಜನಿಕ ಶಿಕ್ಷಣವನ್ನು ಬಳಪಡಿಸಲು ಸೂಕ್ತಕ್ರಮ ತೆಗೆದುಕೊಳ್ಳಲು ಮುಂದಾಗಬೇಕಿತ್ತು. ಆದರೆ ಸರ್ಕಾರದ ಬೇಜವಾಬ್ದಾರಿ ತನದ ಪರಿಣಾಮದಿಂದಾಗಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಿ ಬಲಪಡಿಸಲು ಕೂಡಲೆ ಸರ್ಕಾರ ಶಿಕ್ಷಣ ತಜ್ಞರ ಮತ್ತು ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ ಇದರ ಮೂಲಕ ತಳ ಮಟ್ಟದಲ್ಲಿ ಅಧ್ಯಯನ ನಡೆಸಿ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವುದು ಜರೂರಿದೆ ಎಂದರು.

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಒತ್ತಾಯಿಸಿ ಶೈಕ್ಷಣಿಕ ಸಮಸ್ಯೆಗಳನ್ನು ಗುರುತಿಸಿಕೊಂಡು ಎಸ್.ಎಫ್.ಐ ರಾಜ್ಯದಾಧ್ಯಂತ ಹಗಲಿರುಳು ಹೋರಾಟವನ್ನು ರೂಪಿಸುತ್ತ ಬರುತ್ತಿದೆ. ಆದರೆ ಶಿಕ್ಷಣವನ್ನು ದುರ್ಬಲಗೊಳಿಸುವ ಶಿಕ್ಷಣ ವಿರೋಧಿ ನೀತಿಗಳನ್ನು ಸರ್ಕಾರ ಜಾರಿ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿರುವುದು ಕಂಡು ಬರುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಜೆ.ಶಶಿಕುಮಾರ್ ಮಾತನಾಡಿ, ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಕೈ ಬಿಟ್ಟು ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು ರಾಜ್ಯ ಸರ್ಕಾರ ತನ್ನ ಮುಂಬರುವ ಬಜೆಟ್‌ನಲ್ಲಿ ಕೊಥಾರೆ ಆಯೋಗದಂತೆ ಶೇ.30ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ರಾಜ್ಯದಲ್ಲಿರುವ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ 3500 ರೂಗಳಿಗೆ ಹೆಚ್ಚಿಸಬೇಕು. ಮತ್ತು ಆರೋಗ್ಯ ಭದ್ರತೆ ನೀಡಬೇಕು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ನೀಡಿ ಬಳಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ, ಉಪಾಧ್ಯಕ್ಷೆ ಲಾವಣ್ಯ, ಜಿಲ್ಲಾ ಸಮಿತಿ ಸದಸ್ಯರಾದ ಲೋಕೇಶ್, ಅರ್ಚನಾ, ನಾಗೇಶ್, ಕಾರ್ತಿಕ್, ಗಗನಶ್ರೀ, ಚಂದನ, ಸೋನಿಯಾ, ರಕ್ಷಿತಾ, ಐಶ್ವರ್ಯ ಮುಂತಾದವರು ಇದ್ದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

44 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago