Categories: ಕೋಲಾರ

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% ಅನುದಾನಕ್ಕೆ ಎಸ್‌ಎಫ್‌ಐ ಪ್ರತಿಭಟನೆ

ಕೋಲಾರ: ಮುಂಬರಲಿರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.30ರಷ್ಟು ಅನುದಾನ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಸಂಘಟನೆಯಿಂದ ಮಂಗಳವಾರ ನಗರದ ತಹಶಿಲ್ದಾರ್ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿ ಉಪ ತಹಶಿಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ ಶಿಕ್ಷಣ ಕ್ಷೇತ್ರವು ವಿಶಾಲವಾಗಿ ವ್ಯಾಪಿಸಿದ್ದು ದೇಶ, ವಿದೇಶಗಳಿಂದಲೂ ವಿದ್ಯಾರ್ಥಿಗಳು ಬಂದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಗಣನೀಯವಾಗಿ ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ ಎಂದು ಆರೋಪಿಸಿದರು

ಉನ್ನತ ಶಿಕ್ಷಣ ಉಳ್ಳವರ ಪಾಲಾಗುತ್ತಿದೆ. ರೈತ, ಕಾರ್ಮಿಕ, ದಲಿತ, ಹಿಂದುಳಿದವರ ಮಕ್ಕಳು ಇಂದು ಉನ್ನತ ಶಿಕ್ಷಣವನ್ನು ಪಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಗುಣಮಟ್ಟದ ಶಿಕ್ಷಣ ಸಾರ್ವಜನಿಕ ಸಂಸ್ಥೆಗಳಲ್ಲಿ ಕುಂಟಿತವಾಗುತ್ತಿದೆ. ಸರ್ಕಾರ ಸಾರ್ವಜನಿಕ ಶಿಕ್ಷಣವನ್ನು ಬಳಪಡಿಸಲು ಸೂಕ್ತಕ್ರಮ ತೆಗೆದುಕೊಳ್ಳಲು ಮುಂದಾಗಬೇಕಿತ್ತು. ಆದರೆ ಸರ್ಕಾರದ ಬೇಜವಾಬ್ದಾರಿ ತನದ ಪರಿಣಾಮದಿಂದಾಗಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಿ ಬಲಪಡಿಸಲು ಕೂಡಲೆ ಸರ್ಕಾರ ಶಿಕ್ಷಣ ತಜ್ಞರ ಮತ್ತು ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ ಇದರ ಮೂಲಕ ತಳ ಮಟ್ಟದಲ್ಲಿ ಅಧ್ಯಯನ ನಡೆಸಿ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸುವುದು ಜರೂರಿದೆ ಎಂದರು.

ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಒತ್ತಾಯಿಸಿ ಶೈಕ್ಷಣಿಕ ಸಮಸ್ಯೆಗಳನ್ನು ಗುರುತಿಸಿಕೊಂಡು ಎಸ್.ಎಫ್.ಐ ರಾಜ್ಯದಾಧ್ಯಂತ ಹಗಲಿರುಳು ಹೋರಾಟವನ್ನು ರೂಪಿಸುತ್ತ ಬರುತ್ತಿದೆ. ಆದರೆ ಶಿಕ್ಷಣವನ್ನು ದುರ್ಬಲಗೊಳಿಸುವ ಶಿಕ್ಷಣ ವಿರೋಧಿ ನೀತಿಗಳನ್ನು ಸರ್ಕಾರ ಜಾರಿ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿರುವುದು ಕಂಡು ಬರುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಜೆ.ಶಶಿಕುಮಾರ್ ಮಾತನಾಡಿ, ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಕೈ ಬಿಟ್ಟು ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು ರಾಜ್ಯ ಸರ್ಕಾರ ತನ್ನ ಮುಂಬರುವ ಬಜೆಟ್‌ನಲ್ಲಿ ಕೊಥಾರೆ ಆಯೋಗದಂತೆ ಶೇ.30ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ರಾಜ್ಯದಲ್ಲಿರುವ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ 3500 ರೂಗಳಿಗೆ ಹೆಚ್ಚಿಸಬೇಕು. ಮತ್ತು ಆರೋಗ್ಯ ಭದ್ರತೆ ನೀಡಬೇಕು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ನೀಡಿ ಬಳಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ, ಉಪಾಧ್ಯಕ್ಷೆ ಲಾವಣ್ಯ, ಜಿಲ್ಲಾ ಸಮಿತಿ ಸದಸ್ಯರಾದ ಲೋಕೇಶ್, ಅರ್ಚನಾ, ನಾಗೇಶ್, ಕಾರ್ತಿಕ್, ಗಗನಶ್ರೀ, ಚಂದನ, ಸೋನಿಯಾ, ರಕ್ಷಿತಾ, ಐಶ್ವರ್ಯ ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

11 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

14 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago