ಕೋಲಾರ: ಜಿಲ್ಲೆಯ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದ ಶುದ್ಧೀಕರಣ, ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯರ್ ಕಾಲೇಜುಗಳ ಸ್ಥಾಪನೆಗೆ ಮುಂಬರಲಿರುವ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಸರ್ಕಾರವನ್ನು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು,
ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ ನಾಲೆಗಳು ಇಲ್ಲದ ಜಿಲ್ಲೆಯಾಗಿದೆ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾದ ಕಾರಣ ಇಲ್ಲಿನ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1,500 ಅಡಿ ಆಳದ ಕೊಳವೆಬಾವಿ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದ ಅಂತರ್ಜಲವು ಪಾತಾಳಕ್ಕೆ ಕುಸಿದಿತ್ತು ಹಿಂದೆ ಸಿದ್ದರಾಮಯ್ಯ ಸರ್ಕಾರವು ಕೆ.ಸಿ ವ್ಯಾಲಿ ಯೋಜನೆಯ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಾರಿ ಮಾಡಿದ್ದ ಯೋಜನೆಗೆ ಮೂರನೇ ಹಂತದ ಶುದ್ದೀಕರಣ ಮಾಡಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಕೋಲಾರ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರ್ ಕಾಲೇಜುಗಳು ಸ್ಥಾಪನೆ ಕೇವಲ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಷ್ಟೇ ಸೀಮಿತಗೊಂಡಿದೆ ಸರಕಾರಿ ಕಾಲೇಜುಗಳು ಆರಂಭಗೊಂಡರೆ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗುತ್ತದೆ ಖಾಸಗಿ ಕಾಲೇಜುಗಳಲ್ಲಿನ ದುಬಾರಿ ಶುಲ್ಕ ಇರುವುದರಿಂದ ಜಿಲ್ಲೆಯ ಹಲವಾರು ಮಂದಿ ಪ್ರತಿಭಾನ್ವಿತ ಬಡಮಕ್ಕಳು ವೈದ್ಯಕೀಯ ಮತ್ತು ಇಂಜಿನಿಯರ್ ಶಿಕ್ಷಣದಿಂದಲೇ ವಂಚಿತವಾಗುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಗೆ ಕುಡಿಯುವ ನೀರಿಗಾಗಿ ಸುಮಾರು 16 ವರ್ಷಗಳ ಹಿಂದೆ ಪ್ರಾರಂಭವಾದ ಎತ್ತಿನಹೊಳೆ ಯೋಜನೆಯಿಂದ ನೀರು ಬರುವಂತೆ ಕ್ರಮ ವಹಿಸಬೇಕು ಕೋಲಾರ ನಗರದಲ್ಲಿನ ರಸ್ತೆಗಳ ವಿಸ್ತರಣೆ ಹಾಗೂ ರಿಂಗ್ ರಸ್ತೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಜೊತೆಗೆ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕರೊಬ್ಬರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…