Categories: ಕೋಲಾರ

ಬಜೆಟ್ ನಲ್ಲಿ ಕೆ.ಸಿ ವ್ಯಾಲಿ ಶುದ್ಧೀಕರಣ, ಸರ್ಕಾರಿ ಮೆಡಿಕಲ್, ಇಂಜಿನಿಯರ್ ಕಾಲೇಜಗಳ ಸ್ಥಾಪನೆಗೆ ಯಲುವಗುಳಿ ನಾಗರಾಜ್ ಒತ್ತಾಯ

ಕೋಲಾರ: ಜಿಲ್ಲೆಯ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದ ಶುದ್ಧೀಕರಣ, ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯರ್ ಕಾಲೇಜುಗಳ ಸ್ಥಾಪನೆಗೆ ಮುಂಬರಲಿರುವ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಸರ್ಕಾರವನ್ನು ಜೆಡಿಎಸ್‌ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು,

ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ ನಾಲೆಗಳು ಇಲ್ಲದ ಜಿಲ್ಲೆಯಾಗಿದೆ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾದ ಕಾರಣ ಇಲ್ಲಿನ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1,500 ಅಡಿ ಆಳದ ಕೊಳವೆಬಾವಿ‌ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದ ಅಂತರ್ಜಲವು ಪಾತಾಳಕ್ಕೆ ಕುಸಿದಿತ್ತು ಹಿಂದೆ ಸಿದ್ದರಾಮಯ್ಯ ಸರ್ಕಾರವು ಕೆ.ಸಿ ವ್ಯಾಲಿ ಯೋಜನೆಯ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಾರಿ ಮಾಡಿದ್ದ ಯೋಜನೆಗೆ ಮೂರನೇ ಹಂತದ ಶುದ್ದೀಕರಣ ಮಾಡಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕೋಲಾರ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರ್ ಕಾಲೇಜುಗಳು ಸ್ಥಾಪನೆ ಕೇವಲ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಷ್ಟೇ ಸೀಮಿತಗೊಂಡಿದೆ ಸರಕಾರಿ ಕಾಲೇಜುಗಳು ಆರಂಭಗೊಂಡರೆ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗುತ್ತದೆ ಖಾಸಗಿ ಕಾಲೇಜುಗಳಲ್ಲಿನ ದುಬಾರಿ ಶುಲ್ಕ ಇರುವುದರಿಂದ ಜಿಲ್ಲೆಯ ಹಲವಾರು ಮಂದಿ ಪ್ರತಿಭಾನ್ವಿತ ಬಡಮಕ್ಕಳು ವೈದ್ಯಕೀಯ ಮತ್ತು ಇಂಜಿನಿಯರ್ ಶಿಕ್ಷಣದಿಂದಲೇ ವಂಚಿತವಾಗುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ಕುಡಿಯುವ ನೀರಿಗಾಗಿ ಸುಮಾರು 16 ವರ್ಷಗಳ ಹಿಂದೆ ಪ್ರಾರಂಭವಾದ ಎತ್ತಿನಹೊಳೆ ಯೋಜನೆಯಿಂದ ನೀರು ಬರುವಂತೆ ಕ್ರಮ ವಹಿಸಬೇಕು ಕೋಲಾರ ನಗರದಲ್ಲಿನ ರಸ್ತೆಗಳ ವಿಸ್ತರಣೆ ಹಾಗೂ ರಿಂಗ್ ರಸ್ತೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಜೊತೆಗೆ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕರೊಬ್ಬರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

21 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

22 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

24 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago