ಕೋಲಾರ: ಜಿಲ್ಲೆಯ ಅಂತರ್ಜಲ ಹೆಚ್ಚಳಕ್ಕೆ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ನೀರನ್ನು ಮೂರನೇ ಹಂತದ ಶುದ್ಧೀಕರಣ, ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯರ್ ಕಾಲೇಜುಗಳ ಸ್ಥಾಪನೆಗೆ ಮುಂಬರಲಿರುವ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಸರ್ಕಾರವನ್ನು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು,
ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿ ನಾಲೆಗಳು ಇಲ್ಲದ ಜಿಲ್ಲೆಯಾಗಿದೆ ಶಾಶ್ವತವಾದ ನೀರಾವರಿ ಯೋಜನೆಗಳಿಂದ ವಂಚಿತವಾದ ಕಾರಣ ಇಲ್ಲಿನ ರೈತರು ಕುಡಿಯುವ ನೀರು ಮತ್ತು ಕೃಷಿ ಬಳಕೆಗಾಗಿ ಸುಮಾರು 1,500 ಅಡಿ ಆಳದ ಕೊಳವೆಬಾವಿ ಕೊರೆಸುವ ಅನಿವಾರ್ಯತೆಗೆ ಸಿಲುಕಿದ್ದರು ಇದರಿಂದ ಅಂತರ್ಜಲವು ಪಾತಾಳಕ್ಕೆ ಕುಸಿದಿತ್ತು ಹಿಂದೆ ಸಿದ್ದರಾಮಯ್ಯ ಸರ್ಕಾರವು ಕೆ.ಸಿ ವ್ಯಾಲಿ ಯೋಜನೆಯ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಾರಿ ಮಾಡಿದ್ದ ಯೋಜನೆಗೆ ಮೂರನೇ ಹಂತದ ಶುದ್ದೀಕರಣ ಮಾಡಲು ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಕೋಲಾರ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸರಕಾರಿ ವೈದ್ಯಕೀಯ ಮತ್ತು ಇಂಜಿನಿಯರ್ ಕಾಲೇಜುಗಳು ಸ್ಥಾಪನೆ ಕೇವಲ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಷ್ಟೇ ಸೀಮಿತಗೊಂಡಿದೆ ಸರಕಾರಿ ಕಾಲೇಜುಗಳು ಆರಂಭಗೊಂಡರೆ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಗುತ್ತದೆ ಖಾಸಗಿ ಕಾಲೇಜುಗಳಲ್ಲಿನ ದುಬಾರಿ ಶುಲ್ಕ ಇರುವುದರಿಂದ ಜಿಲ್ಲೆಯ ಹಲವಾರು ಮಂದಿ ಪ್ರತಿಭಾನ್ವಿತ ಬಡಮಕ್ಕಳು ವೈದ್ಯಕೀಯ ಮತ್ತು ಇಂಜಿನಿಯರ್ ಶಿಕ್ಷಣದಿಂದಲೇ ವಂಚಿತವಾಗುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಗೆ ಕುಡಿಯುವ ನೀರಿಗಾಗಿ ಸುಮಾರು 16 ವರ್ಷಗಳ ಹಿಂದೆ ಪ್ರಾರಂಭವಾದ ಎತ್ತಿನಹೊಳೆ ಯೋಜನೆಯಿಂದ ನೀರು ಬರುವಂತೆ ಕ್ರಮ ವಹಿಸಬೇಕು ಕೋಲಾರ ನಗರದಲ್ಲಿನ ರಸ್ತೆಗಳ ವಿಸ್ತರಣೆ ಹಾಗೂ ರಿಂಗ್ ರಸ್ತೆಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಜೊತೆಗೆ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕರೊಬ್ಬರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…