1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.
4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.
5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.
6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…