ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹಲವು ಕೊಡುಗೆ

1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.

4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.

5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.

6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

8 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

18 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

18 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago