ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹಲವು ಕೊಡುಗೆ

1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.

2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್‌ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.

4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.

5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.

6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 hour ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

5 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

5 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

9 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

22 hours ago