1. ‘ನಮ್ಮ ಮೆಟ್ರೋ’ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು ಮೆಟ್ರೋ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
2. ದೇವನಹಳ್ಳಿಯಲ್ಲಿ 407 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬೆಂಗಳೂರು ಸಿಗ್ನೆಚರ್ ಬಿಸಿನೆಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನದಲ್ಲಿ 50 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
3. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ Foxconn ಸಂಸ್ಥೆಯಿಂದ ಮೊಬೈಲ್ ಫೋನ್ಗಳ ಉತ್ಪಾದನಾ ಘಟಕವು 21,911 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಪ್ರಾರಂಭಗೊಂಡಿದೆ. ಇದರಿಂದ 50,000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷಿ ಇದೆ. ಈ ಕಂಪನಿಗೆ ಇ.ಎಸ್.ಡಿ.ಎಂನ ನೀತಿಯಡಿ 6,970 ಕೋಟಿ ರೂ.ಗಳ ಪ್ರೋತ್ಸಾಹಕಗಳನ್ನು ನೀಡಲಾಗುವುದು.
4. 3,190 ಕೋಟಿ ರೂ. ಮೊತ್ತದ ದೇವನಹಳ್ಳಿ-ವಿಜಯಪುರ- ಹೆಚ್ ಕ್ರಾಸ್- ವೇಮಗಲ್- ಮಾಲೂರು – ತಮಿಳುನಾಡು ಗಡಿಯವರೆಗೆ ಕೈಗಾರಿಕಾ ಸಂಪರ್ಕ ಕಲ್ಪಿಸುವ 123 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಪ್ರಸಕ್ತ ಸಾಲಿನಲ್ಲಿ 30 ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.
5. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರಮ್ ನಿರ್ಮಿಸಲಾಗುವುದು.
6. ವಿಪತ್ತು ಉಪಶಮನ ಕಾರ್ಯಕ್ರಮದಡಿ ಸಣ್ಣ ನೀರಾವರಿ ಇಲಾಖೆಯು 250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 41 ಕೆರೆ ತುಂಬಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…