ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.

ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

Leave a Reply

Your email address will not be published. Required fields are marked *