ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…