ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…