Categories: ಶಿಕ್ಷಣ

ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.

ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 hour ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

2 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

15 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

16 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

19 hours ago