Categories: ಶಿಕ್ಷಣ

ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.

ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

7 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

12 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago