ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…