Categories: ಶಿಕ್ಷಣ

ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.

ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.

ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago