ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…