ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
ತಂಗಿ ಐಶ್ವರ್ಯ ಐಎಎಸ್ ಆಗಿ, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಬಡತನವನ್ನು ಮೆಟ್ಟಿನಿಂತು ಈ ಸಾಧನೆ ಮಾಡಿದ ಈ ಸಹೋದರಿಯರು ಲಕ್ಷಾಂತರ ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ಐಶ್ವರ್ಯ ರಾಮನಾಥನ್ ಐಎಎಸ್ ಅಧಿಕಾರಿ:
ಐಶ್ವರ್ಯ ರಾಮನಾಥನ್ 2018 ರಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 628 ನೇ ರ್ಯಾಂಕ್ ಗಳಿಸಿ, ರೈಲ್ವೆ ಅಕೌಂಟ್ಸ್ ಸೇವೆ (ಆರ್ಎಎಸ್) ಗೆ ಆಯ್ಕೆಯಾಗಿದ್ದರು. ಇದರಿಂದ ತೃಪ್ತರಾಗದ ಐಶ್ವರ್ಯ 2019 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ 44 ನೇ ಶ್ರೇಯಾಂಕದೊಂದಿಗೆ ತೇರ್ಗಡೆಯಾದ ಐಶ್ವರ್ಯ ತನ್ನ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗಿ ಹೊರ ಹೊಮ್ಮಿದ್ದರು.
ಸುಶ್ಮಿತಾ ರಾಮನಾಥನ್ ಐಪಿಎಸ್ ಅಧಿಕಾರಿ:
ತನ್ನ ಸಹೋದರಿಯ ಹೆಜ್ಜೆಗಳನ್ನು ಸ್ಪೂರ್ತಿಯಾಗಿಸಿಕೊಂಡ ಸುಶ್ಮಿತಾ ಕೂಡ UPSC ಗೆ ಚೆನ್ನಾಗಿ ತಯಾರಿ ನಡೆಸಿದ್ದರು,ಆದರೆ ಮೊದಲ ಐದು ಪ್ರಯತ್ನಗಳಲ್ಲಿ ವಿಫಲರಾದರು. ಆದಾಗ್ಯೂ, ಛಲವನ್ನು ಬಿಡದೇ 2022 ರಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು. ಈ ಬಾರಿ ಅಖಿಲ ಭಾರತ ಮಟ್ಟದಲ್ಲಿ 528 ನೇ ಶ್ರೇಯಾಂಕದೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸುಶ್ಮಿತಾ ಐಪಿಎಸ್ ಆಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಸಹೋದರಿಯರು ಇದೀಗ ಲಕ್ಷಾಂತರ ಯುಪಿಎಸ್ಸಿ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…