ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ನೆಸ್ಟ್ ಟೀ ಶಾಪ್ ನಲ್ಲಿ ನಡೆದಿದೆ…
ರಾತ್ರಿ ವೇಳೆ ಟೀ ಅಂಗಡಿ ತೆಗೆದಿದ್ದ ಕಾರಣ ಟೀ ಅಂಗಡಿ ಯುವಕನ ಮೇಲೆ ದೇವನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಕೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ..
‘ಬೇಡ ಬಿಟ್ಬಿಡಿ ಸಾರ್’ ಅಂದ್ರು ಅಂಗಡಿಯಿಂದ ಎಳೆದುಕೊಂಡು ಲಾಟಿಯಿಂದ ಹೊಡೆದು ದರ್ಪ ಮೆರೆದಿದ್ದಾರೆ.. ‘ನನಗೇ ಹೊಡಿಬೇಡಿ ಅಂತೀಯ’ ಎಂದು ಮನಸ್ಸೋ ಇಚ್ಛೆ ಇನ್ಸಪೆಕ್ಟರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ..
ಕೆಲ ತಿಂಗಳ ಹಿಂದೆ ನಡೆಸಿರುವ ದೌರ್ಜನ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ..
ಹಲ್ಲೆಗೊಳಗಾದ ಹುಡುಗ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಟೀ ಅಂಗಡಿ ಓಪನ್ ಮಾಡಿದ್ದ.
ಬರುವ ಗ್ರಾಹಕರಿಗೆ ಟೀ ಮಾಡಿಕೊಡಲು ಪೂರ್ವಸಿದ್ಧತೆ ನಡೆಸುತ್ತಿದ್ದ. ಈಗಿರುವಾಗ ಯಾವುದೇ ಕಾರಣ ನೀಡದೆ ಏಕಾಏಕಿ ಬಂದು ಹುಡುಗನ ಮೇಲೆ ಇನ್ಸ್ ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ..
ಇನ್ಸಪೆಕ್ಟರ್ ರಾಕೇಶ್ ಮತ್ತು ಇನ್ನಿತರ ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಆರೋಪ ಕೇಳಿಬಂದಿದೆ..
ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ..
ದೌರ್ಜನ್ಯ ನಡೆಸಿದವರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ..
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…