ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ನೆಸ್ಟ್ ಟೀ ಶಾಪ್ ನಲ್ಲಿ ನಡೆದಿದೆ…
ರಾತ್ರಿ ವೇಳೆ ಟೀ ಅಂಗಡಿ ತೆಗೆದಿದ್ದ ಕಾರಣ ಟೀ ಅಂಗಡಿ ಯುವಕನ ಮೇಲೆ ದೇವನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಕೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ..
‘ಬೇಡ ಬಿಟ್ಬಿಡಿ ಸಾರ್’ ಅಂದ್ರು ಅಂಗಡಿಯಿಂದ ಎಳೆದುಕೊಂಡು ಲಾಟಿಯಿಂದ ಹೊಡೆದು ದರ್ಪ ಮೆರೆದಿದ್ದಾರೆ.. ‘ನನಗೇ ಹೊಡಿಬೇಡಿ ಅಂತೀಯ’ ಎಂದು ಮನಸ್ಸೋ ಇಚ್ಛೆ ಇನ್ಸಪೆಕ್ಟರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ..
ಕೆಲ ತಿಂಗಳ ಹಿಂದೆ ನಡೆಸಿರುವ ದೌರ್ಜನ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ..
ಹಲ್ಲೆಗೊಳಗಾದ ಹುಡುಗ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಟೀ ಅಂಗಡಿ ಓಪನ್ ಮಾಡಿದ್ದ.
ಬರುವ ಗ್ರಾಹಕರಿಗೆ ಟೀ ಮಾಡಿಕೊಡಲು ಪೂರ್ವಸಿದ್ಧತೆ ನಡೆಸುತ್ತಿದ್ದ. ಈಗಿರುವಾಗ ಯಾವುದೇ ಕಾರಣ ನೀಡದೆ ಏಕಾಏಕಿ ಬಂದು ಹುಡುಗನ ಮೇಲೆ ಇನ್ಸ್ ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ..
ಇನ್ಸಪೆಕ್ಟರ್ ರಾಕೇಶ್ ಮತ್ತು ಇನ್ನಿತರ ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಆರೋಪ ಕೇಳಿಬಂದಿದೆ..
ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ..
ದೌರ್ಜನ್ಯ ನಡೆಸಿದವರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ..
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…
ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…
ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…