ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ನೆಸ್ಟ್ ಟೀ ಶಾಪ್ ನಲ್ಲಿ ನಡೆದಿದೆ…
ರಾತ್ರಿ ವೇಳೆ ಟೀ ಅಂಗಡಿ ತೆಗೆದಿದ್ದ ಕಾರಣ ಟೀ ಅಂಗಡಿ ಯುವಕನ ಮೇಲೆ ದೇವನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಕೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ..
‘ಬೇಡ ಬಿಟ್ಬಿಡಿ ಸಾರ್’ ಅಂದ್ರು ಅಂಗಡಿಯಿಂದ ಎಳೆದುಕೊಂಡು ಲಾಟಿಯಿಂದ ಹೊಡೆದು ದರ್ಪ ಮೆರೆದಿದ್ದಾರೆ.. ‘ನನಗೇ ಹೊಡಿಬೇಡಿ ಅಂತೀಯ’ ಎಂದು ಮನಸ್ಸೋ ಇಚ್ಛೆ ಇನ್ಸಪೆಕ್ಟರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ..
ಕೆಲ ತಿಂಗಳ ಹಿಂದೆ ನಡೆಸಿರುವ ದೌರ್ಜನ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ..
ಹಲ್ಲೆಗೊಳಗಾದ ಹುಡುಗ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಟೀ ಅಂಗಡಿ ಓಪನ್ ಮಾಡಿದ್ದ.
ಬರುವ ಗ್ರಾಹಕರಿಗೆ ಟೀ ಮಾಡಿಕೊಡಲು ಪೂರ್ವಸಿದ್ಧತೆ ನಡೆಸುತ್ತಿದ್ದ. ಈಗಿರುವಾಗ ಯಾವುದೇ ಕಾರಣ ನೀಡದೆ ಏಕಾಏಕಿ ಬಂದು ಹುಡುಗನ ಮೇಲೆ ಇನ್ಸ್ ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ..
ಇನ್ಸಪೆಕ್ಟರ್ ರಾಕೇಶ್ ಮತ್ತು ಇನ್ನಿತರ ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಆರೋಪ ಕೇಳಿಬಂದಿದೆ..
ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ..
ದೌರ್ಜನ್ಯ ನಡೆಸಿದವರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ..
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…