ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೈವೆ ನೆಸ್ಟ್ ಟೀ ಶಾಪ್ ನಲ್ಲಿ ನಡೆದಿದೆ…
ರಾತ್ರಿ ವೇಳೆ ಟೀ ಅಂಗಡಿ ತೆಗೆದಿದ್ದ ಕಾರಣ ಟೀ ಅಂಗಡಿ ಯುವಕನ ಮೇಲೆ ದೇವನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ರಾಕೇಶ್ ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ..
‘ಬೇಡ ಬಿಟ್ಬಿಡಿ ಸಾರ್’ ಅಂದ್ರು ಅಂಗಡಿಯಿಂದ ಎಳೆದುಕೊಂಡು ಲಾಟಿಯಿಂದ ಹೊಡೆದು ದರ್ಪ ಮೆರೆದಿದ್ದಾರೆ.. ‘ನನಗೇ ಹೊಡಿಬೇಡಿ ಅಂತೀಯ’ ಎಂದು ಮನಸ್ಸೋ ಇಚ್ಛೆ ಇನ್ಸಪೆಕ್ಟರ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ..
ಕೆಲ ತಿಂಗಳ ಹಿಂದೆ ನಡೆಸಿರುವ ದೌರ್ಜನ್ಯದ ವಿಡಿಯೋ ಈಗ ವೈರಲ್ ಆಗುತ್ತಿದೆ..
ಹಲ್ಲೆಗೊಳಗಾದ ಹುಡುಗ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಟೀ ಅಂಗಡಿ ಓಪನ್ ಮಾಡಿದ್ದ.
ಬರುವ ಗ್ರಾಹಕರಿಗೆ ಟೀ ಮಾಡಿಕೊಡಲು ಪೂರ್ವಸಿದ್ಧತೆ ನಡೆಸುತ್ತಿದ್ದ. ಈಗಿರುವಾಗ ಯಾವುದೇ ಕಾರಣ ನೀಡದೆ ಏಕಾಏಕಿ ಬಂದು ಹುಡುಗನ ಮೇಲೆ ಇನ್ಸ್ ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ..
ಇನ್ಸಪೆಕ್ಟರ್ ರಾಕೇಶ್ ಮತ್ತು ಇನ್ನಿತರ ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಆರೋಪ ಕೇಳಿಬಂದಿದೆ..
ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ..
ದೌರ್ಜನ್ಯ ನಡೆಸಿದವರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ..
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…