ಬಡವರಿಗೆ ಅನ್ನದಾಸೋಹ ಹಾಗೂ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ 24ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಯುವಕ ಕಿರಣ್

ಬಾಶೆಟ್ಟಿಹಳ್ಳಿಯ ಅಂಬೇಡ್ಕರ್ ನಗರದ ನಿವಾಸಿ ಕಿರಣ್ ಅವರು ತಮ್ಮ 24ನೇ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸುವುದಕ್ಕೆ ನಿರ್ಧಾರ ಮಾಡಿ, ಸತತವಾಗಿ ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನ ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿ ವತಿಯಿಂದ ಅನ್ನದಾಸೋಹಿ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಡುಬಡವರಿಗೆ ಆಹಾರ ವಿತರಣೆ ಮಾಡಿ, ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡರು.

ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ, ಹುಟ್ಟು ಹಬ್ಬವನ್ನು ದುಂದು ವೆಚ್ಚ ವ್ಯಯಿಸಿ ಆಚರಣೆ ಮಾಡಿ ಸಂಭ್ರಮಿಸುವ ಬದಲು ಬಡವರಿಗೆ ಊಟ ಕೊಟ್ಟು ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಇಂದಿನ ಅನ್ನದಾಸೋಹ ಕಾರ್ಯಕ್ರಮಕ್ಕೆ ಯುವಕ‌ ಕಿರಣ್ ಅವರು ತಮ್ಮ ಹುಟ್ಟುಹಬ್ಬ ಹಿನ್ನೆಲೆ ನಿರಂತರ ಅನ್ನದಾಸೋಹ‌ಕ್ಕೆ ಸಹಾಯಹಸ್ತ ನೀಡಿದ್ದಾರೆ.

ಹಾಗೇ ಶಾಲಾ ಮಕ್ಕಳ ವಿದ್ಯಾರ್ಜನೆಗೆ ಅವಶ್ಯಕವಿರುವ ಸಾಮಗ್ರಿಗಳನ್ನು ಮಕ್ಕಳಿಗೆ ನೀಡಿದ್ದಾರೆ. ಅವರ ಸಮಾಜ ಸೇವೆ ಮತ್ತಷ್ಟು ಮುಂದುವರೆಯಲಿ ಎಂದು ಹಾರೈಸಿದರು. ತಮ್ಮ ಯಾವುದೇ ವಿಶೇಷ ದಿನಗಳನ್ನು ಸಂಭ್ರಮಾಚರಣೆಯನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸುವಂತೆ ಮನವಿ ಮಾಡಿದರು.

ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿ ನಿರಂತರ ಅನ್ನದಾಸೋಹ ಸಮಿತಿ ಸಹಕಾರ ಜೊತೆ ಬಡವರಿಗೆ ಅನ್ನದಾಸೋಹ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ಹಾಗೂ ಲೇಖನಿಯನ್ನು ನೀಡಿದ್ದೇವೆ. ಇದರಿಂದ‌ ನಮಗೆ ತುಂಬಾ ಖುಷಿ‌ ಕೊಟ್ಟಿದೆ. ಮುಂದೆ ಇದೇ ರೀತಿ ಸರಳವಾಗಿ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತೇನೆ ಎಂದು ಕಿರಣ್ ಅವರು ತಿಳಿಸಿದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 minute ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago