ಬಡವರಿಗೆ ಅನ್ನದಾಸೋಹ ಹಾಗೂ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ 24ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಯುವಕ ಕಿರಣ್

ಬಾಶೆಟ್ಟಿಹಳ್ಳಿಯ ಅಂಬೇಡ್ಕರ್ ನಗರದ ನಿವಾಸಿ ಕಿರಣ್ ಅವರು ತಮ್ಮ 24ನೇ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸುವುದಕ್ಕೆ ನಿರ್ಧಾರ ಮಾಡಿ, ಸತತವಾಗಿ ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನ ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿ ವತಿಯಿಂದ ಅನ್ನದಾಸೋಹಿ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಡುಬಡವರಿಗೆ ಆಹಾರ ವಿತರಣೆ ಮಾಡಿ, ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡರು.

ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ, ಹುಟ್ಟು ಹಬ್ಬವನ್ನು ದುಂದು ವೆಚ್ಚ ವ್ಯಯಿಸಿ ಆಚರಣೆ ಮಾಡಿ ಸಂಭ್ರಮಿಸುವ ಬದಲು ಬಡವರಿಗೆ ಊಟ ಕೊಟ್ಟು ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಇಂದಿನ ಅನ್ನದಾಸೋಹ ಕಾರ್ಯಕ್ರಮಕ್ಕೆ ಯುವಕ‌ ಕಿರಣ್ ಅವರು ತಮ್ಮ ಹುಟ್ಟುಹಬ್ಬ ಹಿನ್ನೆಲೆ ನಿರಂತರ ಅನ್ನದಾಸೋಹ‌ಕ್ಕೆ ಸಹಾಯಹಸ್ತ ನೀಡಿದ್ದಾರೆ.

ಹಾಗೇ ಶಾಲಾ ಮಕ್ಕಳ ವಿದ್ಯಾರ್ಜನೆಗೆ ಅವಶ್ಯಕವಿರುವ ಸಾಮಗ್ರಿಗಳನ್ನು ಮಕ್ಕಳಿಗೆ ನೀಡಿದ್ದಾರೆ. ಅವರ ಸಮಾಜ ಸೇವೆ ಮತ್ತಷ್ಟು ಮುಂದುವರೆಯಲಿ ಎಂದು ಹಾರೈಸಿದರು. ತಮ್ಮ ಯಾವುದೇ ವಿಶೇಷ ದಿನಗಳನ್ನು ಸಂಭ್ರಮಾಚರಣೆಯನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸುವಂತೆ ಮನವಿ ಮಾಡಿದರು.

ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡಿ ನಿರಂತರ ಅನ್ನದಾಸೋಹ ಸಮಿತಿ ಸಹಕಾರ ಜೊತೆ ಬಡವರಿಗೆ ಅನ್ನದಾಸೋಹ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ಹಾಗೂ ಲೇಖನಿಯನ್ನು ನೀಡಿದ್ದೇವೆ. ಇದರಿಂದ‌ ನಮಗೆ ತುಂಬಾ ಖುಷಿ‌ ಕೊಟ್ಟಿದೆ. ಮುಂದೆ ಇದೇ ರೀತಿ ಸರಳವಾಗಿ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತೇನೆ ಎಂದು ಕಿರಣ್ ಅವರು ತಿಳಿಸಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

5 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

6 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

7 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

8 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

15 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago