Categories: ಕೋಲಾರ

ಬಡವರಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ: ಜೆಡಿಎಸ್‌ ಮುಖಂಡ ಸಿ.ಎಂ.ಆರ್ ಶ್ರೀನಾಥ್

ಕೋಲಾರ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು

ತಾಲೂಕಿನ ಕ್ಯಾಲನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಿಎಂಆರ್ ಶ್ರೀನಾಥ್ ಫೌಂಡೇಶನ್ ಹಾಗೂ ಆರ್.ಎಲ್ ಜಾಲಪ್ಪ ಆಸ್ಪತ್ರೆ ವತಿಯಿಂದ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ರೋಗಗಳು ಬರುವ ಮುಂಚೆ ಎಚ್ಚರ ವಹಿಸಿದರೆ ಮಾತ್ರವೇ ಉತ್ತಮ ಆರೋಗ್ಯವನ್ನು ಕಾಪಾಡುವ ಜೊತೆಗೆ ಆಸ್ಪತ್ರೆಗೆ ಹೋಗುವುದು ಮತ್ತು ಚಿಕಿತ್ಸೆಯಿಂದ  ದೂರ ಇರಲು ಸಾಧ್ಯವಾಗುತ್ತದೆ ಎಂದರು.

ಚಿಕ್ಕ ಮಕ್ಕಳಿಂದ ಹಿರಿಯ ರವರೆಗೂ ಆರೋಗ್ಯವಾಗಿದ್ದರೆ, ಸುಖವಾಗಿ ಜೀವನ ನಡೆಸಲು ಸಾಧ್ಯ ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಬರುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಾ ಇದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಇವತ್ತಿನ ಕಾರ್ಪೊರೇಟ್ ಯುಗದಲ್ಲಿ ಮನುಷ್ಯನಿಗೆ ಆರೋಗ್ಯ ಮತ್ತು ಶಿಕ್ಷಣ ಎಂಬುದು ಬಡವರಿಗೆ ದೂರದ ಮಾತಾಗಿದೆ ಇಂತಹ ಸಂದರ್ಭದಲ್ಲಿ ಬಡವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ವಿವಿಧ ರೀತಿಯ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಕ್ಯಾಲನೂರು ಗ್ರಾಪಂ ಅಧ್ಯಕ್ಷ ರಮೇಶ್, ಸದಸ್ಯ ಲೋಕೇಶ್, ರೋಟರಿ ಸುಧಾಕರ್, ಬಲಿಜ ಸಂಘದ  ಅಶೋಕ್, ಮುಖಂಡರಾದ ಅಮ್ಮನಲ್ಲೂರು ರಮೇಶ್, ರಾಮಣ್ಣ, ನರಸಿಂಹಪ್ಪ, ಬೈರಾಂಡಹಳ್ಳಿ ವೆಂಕಟೇಶ್, ಪ್ರಕಾಶ್, ನಾಗೇಶ್, ಬಾಬಾ ಸಾಬ್, ಬಿಎಸ್ಎನ್ಎಲ್ ವೆಂಕಟೇಶ್, ಪ್ರಮುಖ ವೈದ್ಯರಾದ ಪ್ರದೀಪ್, ಸುನಿಲ್, ಪ್ರಸನ್ನ ಮುಂತಾದವರು ಇದ್ದರು

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago