ಕೋಲಾರ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು
ತಾಲೂಕಿನ ಕ್ಯಾಲನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಿಎಂಆರ್ ಶ್ರೀನಾಥ್ ಫೌಂಡೇಶನ್ ಹಾಗೂ ಆರ್.ಎಲ್ ಜಾಲಪ್ಪ ಆಸ್ಪತ್ರೆ ವತಿಯಿಂದ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ರೋಗಗಳು ಬರುವ ಮುಂಚೆ ಎಚ್ಚರ ವಹಿಸಿದರೆ ಮಾತ್ರವೇ ಉತ್ತಮ ಆರೋಗ್ಯವನ್ನು ಕಾಪಾಡುವ ಜೊತೆಗೆ ಆಸ್ಪತ್ರೆಗೆ ಹೋಗುವುದು ಮತ್ತು ಚಿಕಿತ್ಸೆಯಿಂದ ದೂರ ಇರಲು ಸಾಧ್ಯವಾಗುತ್ತದೆ ಎಂದರು.
ಚಿಕ್ಕ ಮಕ್ಕಳಿಂದ ಹಿರಿಯ ರವರೆಗೂ ಆರೋಗ್ಯವಾಗಿದ್ದರೆ, ಸುಖವಾಗಿ ಜೀವನ ನಡೆಸಲು ಸಾಧ್ಯ ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಬರುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಾ ಇದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಇವತ್ತಿನ ಕಾರ್ಪೊರೇಟ್ ಯುಗದಲ್ಲಿ ಮನುಷ್ಯನಿಗೆ ಆರೋಗ್ಯ ಮತ್ತು ಶಿಕ್ಷಣ ಎಂಬುದು ಬಡವರಿಗೆ ದೂರದ ಮಾತಾಗಿದೆ ಇಂತಹ ಸಂದರ್ಭದಲ್ಲಿ ಬಡವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ವಿವಿಧ ರೀತಿಯ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಕ್ಯಾಲನೂರು ಗ್ರಾಪಂ ಅಧ್ಯಕ್ಷ ರಮೇಶ್, ಸದಸ್ಯ ಲೋಕೇಶ್, ರೋಟರಿ ಸುಧಾಕರ್, ಬಲಿಜ ಸಂಘದ ಅಶೋಕ್, ಮುಖಂಡರಾದ ಅಮ್ಮನಲ್ಲೂರು ರಮೇಶ್, ರಾಮಣ್ಣ, ನರಸಿಂಹಪ್ಪ, ಬೈರಾಂಡಹಳ್ಳಿ ವೆಂಕಟೇಶ್, ಪ್ರಕಾಶ್, ನಾಗೇಶ್, ಬಾಬಾ ಸಾಬ್, ಬಿಎಸ್ಎನ್ಎಲ್ ವೆಂಕಟೇಶ್, ಪ್ರಮುಖ ವೈದ್ಯರಾದ ಪ್ರದೀಪ್, ಸುನಿಲ್, ಪ್ರಸನ್ನ ಮುಂತಾದವರು ಇದ್ದರು
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…