ಕೋಲಾರ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು
ತಾಲೂಕಿನ ಕ್ಯಾಲನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಿಎಂಆರ್ ಶ್ರೀನಾಥ್ ಫೌಂಡೇಶನ್ ಹಾಗೂ ಆರ್.ಎಲ್ ಜಾಲಪ್ಪ ಆಸ್ಪತ್ರೆ ವತಿಯಿಂದ ಉಚಿತ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ರೋಗಗಳು ಬರುವ ಮುಂಚೆ ಎಚ್ಚರ ವಹಿಸಿದರೆ ಮಾತ್ರವೇ ಉತ್ತಮ ಆರೋಗ್ಯವನ್ನು ಕಾಪಾಡುವ ಜೊತೆಗೆ ಆಸ್ಪತ್ರೆಗೆ ಹೋಗುವುದು ಮತ್ತು ಚಿಕಿತ್ಸೆಯಿಂದ ದೂರ ಇರಲು ಸಾಧ್ಯವಾಗುತ್ತದೆ ಎಂದರು.
ಚಿಕ್ಕ ಮಕ್ಕಳಿಂದ ಹಿರಿಯ ರವರೆಗೂ ಆರೋಗ್ಯವಾಗಿದ್ದರೆ, ಸುಖವಾಗಿ ಜೀವನ ನಡೆಸಲು ಸಾಧ್ಯ ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಬರುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಾ ಇದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಇವತ್ತಿನ ಕಾರ್ಪೊರೇಟ್ ಯುಗದಲ್ಲಿ ಮನುಷ್ಯನಿಗೆ ಆರೋಗ್ಯ ಮತ್ತು ಶಿಕ್ಷಣ ಎಂಬುದು ಬಡವರಿಗೆ ದೂರದ ಮಾತಾಗಿದೆ ಇಂತಹ ಸಂದರ್ಭದಲ್ಲಿ ಬಡವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ವಿವಿಧ ರೀತಿಯ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಕ್ಯಾಲನೂರು ಗ್ರಾಪಂ ಅಧ್ಯಕ್ಷ ರಮೇಶ್, ಸದಸ್ಯ ಲೋಕೇಶ್, ರೋಟರಿ ಸುಧಾಕರ್, ಬಲಿಜ ಸಂಘದ ಅಶೋಕ್, ಮುಖಂಡರಾದ ಅಮ್ಮನಲ್ಲೂರು ರಮೇಶ್, ರಾಮಣ್ಣ, ನರಸಿಂಹಪ್ಪ, ಬೈರಾಂಡಹಳ್ಳಿ ವೆಂಕಟೇಶ್, ಪ್ರಕಾಶ್, ನಾಗೇಶ್, ಬಾಬಾ ಸಾಬ್, ಬಿಎಸ್ಎನ್ಎಲ್ ವೆಂಕಟೇಶ್, ಪ್ರಮುಖ ವೈದ್ಯರಾದ ಪ್ರದೀಪ್, ಸುನಿಲ್, ಪ್ರಸನ್ನ ಮುಂತಾದವರು ಇದ್ದರು
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…