ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಅನ್ನ ಭಾಗ್ಯದ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು, ಇದರ ಭಾಗವಾಗಿಯೇ ಬಡವರ ಬಿಪಿಎಲ್ ಪಡಿತರ ಕಾರ್ಡ್ ಗಳನ್ನು ರದ್ದುಪಡಿಸುವ ಕ್ರಮವು ಖಂಡನೀಯವಾಗಿದ್ದು. ಬಡವರ ಅನ್ನಕ್ಕೆ ಕೈಹಾಕಿದೆ ಕೂಡಲೇ ಈ ಆದೇಶವನ್ನು ವಾಪಸ್ಸು ಪಡೆಯುವಂತೆ ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಯಾವುದೇ ಪರಿಶೀಲನೆಯಾಗಲಿ ತಜ್ಞರ ಮಾರ್ಗದರ್ಶನವಾಗಲಿ ಪಡೆಯದೇ ಅವೈಜ್ಞಾನಿಕವಾದ ಆದೇಶವನ್ನು ಜಾರಿ ಮಾಡಲು ಹೊರಟಿದ್ದಾರೆ ಈ ಮೂಲಕ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ಸಾಮಾನ್ಯ ವರ್ಗದ ಜನರು ಆರ್ಥಿಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಬಡವರ ಪರವಾದ ಸರ್ಕಾರ ಎಂದು ಅಧಿಕಾರಕ್ಕೆ ಬಂದು ಬಡವರ ಅನ್ನವನ್ನು ಕಸಿಯಲು ಹೊರಟಿದ್ದಾರೆ ಈ ಕ್ರಮವನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಿಂದ ವರ್ಷಕ್ಕೆ ಕನಿಷ್ಠ 55 ರಿಂದ 60 ಸಾವಿರ ಕೋಟಿ ಖರ್ಚಾಗುತ್ತಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ ಇಷ್ಟೊಂದು ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರವು ಬಡವರ ಬಿಪಿಎಲ್ ಕಾರ್ಡ್ ಸಂಖ್ಯೆಯನ್ನು ಕಡಿಮೆ ಮಾಡಿ ಅದರ ಮೂಲಕವೇ ಹಣ ಉಳಿಸಲು ಹೊರಟಿದ್ದು ಈ ಕ್ರಮ ಜಾರಿಯಾದರೆ ಬಡವರನ್ನು ಬೀದಿಗೆ ತಂದು ನಿಲ್ಲಿಸಿದ ಸಾಧನೆ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಕೊಟ್ಟ ಆಶ್ವಾಸನೆಗಳಿಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಿದೆ ಅಧಿಕಾರಕ್ಕೆ ಬರುವ ಮುಂಚೆ ಒಂದು ಮಾತು ಅಧಿಕಾರಕ್ಕೆ ಬಂದ ನಂತರ ಮತ್ತೊಂದು ಮಾತಾಗಿದೆ ಈ ಸರಕಾರದಿಂದ ಬಡವರ ಮನೆ ಅನ್ನ ಕಿತ್ತುಕೊಳ್ಳುವ ಆದೇಶವನ್ನು ವಾಪಸ್ಸು ಪಡೆದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಮಾಡುವ ಮೂಲಕ ಕೊಟ್ಟ ಮಾತನ್ನು ಸರ್ಕಾರವು ಉಳಿಸಿಕೊಳ್ಳಬೇಕು ಎಂದು ಡಾ.ನಾಗರಾಜ್ ಒತ್ತಾಯಿಸಿದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…